ಬಿಜೆಪಿ ಮಾಜಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

Published : Dec 25, 2017, 10:07 PM ISTUpdated : Apr 11, 2018, 12:55 PM IST
ಬಿಜೆಪಿ ಮಾಜಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಸಾರಾಂಶ

ಪತಿ ಸಾವಿನಿಂದ 2015ರ ಪಾಲಿಕೆ ಚುನಾವಣೆಯಿಂದ ದೂರ ಉಳಿದಿದ್ದ ಮಂಜುಳಾದೇವಿ ಮೂರು ವರ್ಷಗಳ ಬಳಿಕ ರಾಜಕೀಯ ಜೀವನಕ್ಕೆ ಮರಳಿದ್ದಾರೆ.

ಬೆಂಗಳೂರು(ಡಿ.25): ಕೆ.ಆರ್. ಪುರದ ದೇವಸಂದ್ರ ವಾರ್ಡ್‌ನ ಬಿಬಿಎಂಪಿ ಮಾಜಿ ಸದಸ್ಯೆ ಮಂಜುಳಾದೇವಿ ಅವರು ಬಿಜೆಪಿ ಪಕ್ಷ ತೊರೆದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಮಂಜುಳಾದೇವಿ ಅವರು ಬಿಜೆಪಿಯಿಂದ ಪಾಲಿಕೆ ಸದಸ್ಯೆಯಾಗಿದ್ದರು. 2014ರಲ್ಲಿ ಪತಿ ಸಿರಿಪುರ ಎನ್. ಶ್ರೀನಿವಾಸ್‌ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಪತಿ ಸಾವಿನಿಂದ 2015ರ ಪಾಲಿಕೆ ಚುನಾವಣೆಯಿಂದ ದೂರ ಉಳಿದಿದ್ದ ಮಂಜುಳಾದೇವಿ ಮೂರು ವರ್ಷಗಳ ಬಳಿಕ ರಾಜಕೀಯ ಜೀವನಕ್ಕೆ ಮರಳಿದ್ದಾರೆ. ಆದರೆ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವುದು ಕುತೂಹಲ ಮೂಡಿಸಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಸಚಿವ ಕೃಷ್ಣಬೈರೇಗೌಡ, ಮೇಯರ್ ಸಂಪತ್‌ರಾಜ್ ಹಲವರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರಾವಳಿ ಉತ್ಸವ: ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ವಿಶೇಷ ಚೇತನ ಮಕ್ಕಳು, ಸತೀಶ್ ಸೈಲ್ ಪುತ್ರಿಯ ಈ ಮಹತ್ಕಾರ್ಯಕ್ಕೆ ಜೈ ಎಂದ ಜನತೆ
ಸಚಿವ ಜಮೀರ್ ಆಪ್ತ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ದಾಳಿ: ಬಯಲಾಯ್ತು ಕೋಟಿ ಕೋಟಿ ಸಾಮ್ರಾಜ್ಯ!