ಪ್ರಾಬಲ್ಯದ ರಾಜ್ಯಗಳಲ್ಲಿ ಮತ್ತೆ ಬಿಜೆಪಿಗೆ ಒಲಿಯುತ್ತಾ ಜಯ

Published : Aug 24, 2018, 08:58 AM ISTUpdated : Sep 09, 2018, 09:51 PM IST
ಪ್ರಾಬಲ್ಯದ ರಾಜ್ಯಗಳಲ್ಲಿ ಮತ್ತೆ ಬಿಜೆಪಿಗೆ ಒಲಿಯುತ್ತಾ ಜಯ

ಸಾರಾಂಶ

ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಭಾವಿಸಲಾದ ಮೂರು ರಾಜ್ಯಗಳಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು ಈ ಸಂಬಂಧ ಬಿಜೆಪಿ ಮುಖಂಡರು ಸಭೆ ಸೇರಿ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡಲು ಸಿದ್ಧರಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳ ಆರಂಭದಲ್ಲೇ ಬಿಜೆಪಿ ನಾಯಕರು ಸಭೆ ಸೇರಲಿದ್ದಾರೆ. 

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೆ.8-9ರಂದು ಇಲ್ಲಿ ನಡೆಯಲಿದೆ. ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಡ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವವನ್ನು ಪಡೆದಿದೆ.

ದೇಶಾದ್ಯಂತ ಹಿರಿಯ ಮುಖಂಡರನ್ನೊಳಗೊಂಡ ಪಕ್ಷದ ಕಾರ್ಯಕಾರಿಣಿ ಸಭೆ ಆ.18-19ರಂದು ನಡೆಯಬೇಕಿತ್ತು. ಆದರೆ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ನಿಧನದಿಂದಾಗಿ ಸಭೆ ಮುಂದೂಡಲ್ಪಟ್ಟಿತ್ತು.

ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾದ ಬಿಜೆಪಿ ಅಧಿಕಾರದಲ್ಲಿರುವ ಮೂರು ಪ್ರಮುಖ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ, ಪಕ್ಷಕ್ಕೆ ಈ ಸಭೆ ಮಹತ್ವದ್ದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ