
ನವದೆಹಲಿ (ಡಿ. 31): ಅರುಣಾಚಲ ಪ್ರದೇಶ ರಾಜಕೀಯಯದಲ್ಲಿ ಬದಲಾವಣೆ ಗಾಳಿ ಬೀಸಿದೆ. ಮುಖ್ಯಮಂತ್ರಿ ಪೇಮಾ ಖಂಡು 33 ಜನ ಶಾಸಕರೊಂದಿಗೆ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.
“ಅರುಣಾಚಲ ಪ್ರದೇಶದಲ್ಲಿ ಕಡೆಗೂ ಕಮಲ ಅರಳಿದೆ. ಹೊಸ ವರ್ಷದಲ್ಲಿ ಹೊಸ ಸರ್ಕಾರದಲ್ಲಿ ರಾಜ್ಯದ ಜನ ಅಭಿವೃದ್ಧಿಯನ್ನು ಕಾಣಲಿದ್ದಾರೆ" ಎಂದು ಖಂಡು ಹೇಳಿದ್ದಾರೆ.
ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪೇಮಾ ಖಂಡು ಸೇರಿದಂತೆ 6 ಜನ ಶಾಸಕರನ್ನು ಪಿಪಿಎ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.
ಖಂಡು 33 ಮಂದಿ ಶಾಸಕರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಅರುಣಾಚಲ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ 60 ಸ್ಥಾನಗಳನ್ನು ಗೆದ್ದು ಹೊಸ ಸರ್ಕಾರವನ್ನು ರಚಿಸಲಿದೆ. ಪೀಮಾ ಖಂಡು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ತಾಪಿರ್ ಗಾವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.