
ಪಣಜಿ(ಅ.21): ಮುಖ್ಯಮಂತ್ರಿ ಮನೋಹರ ಪರ್ರಿಕರ್ ಅನಾರೋಗ್ಯಪೀಡಿತರಾಗಿ ಹಾಸಿಗೆ ಹಿಡಿದ ಮೇಲೆ ಇದೇ ಮೊದಲ ಬಾರಿಗೆ ಗೋವಾ ಬಿಜೆಪಿ ಮಿತ್ರಕೂಟ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಪರ್ರಿಕರ್ ಅವರ ಕಾಯಿಲೆಯಿಂದಾಗಿ ನನ್ನ ಹಾಗೂ ಸರ್ಕಾರದ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಉಂಟಾಗುತ್ತಿದೆ ಎಂದು ಬಿಜೆಪಿಯ ಮಿತ್ರಪಕ್ಷ ಗೋವಾ ಫಾರ್ವರ್ಡ್ ಪಾರ್ಟಿಯ ಮುಖ್ಯಸ್ಥ ವಿಜಯ್ ಸರ್ದೇಸಾಯಿ ಅವರು ಶನಿವಾರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಮೇದೋಜೀರಕ ಗ್ರಂಥಿಯ ಸಮಸ್ಯೆಗೆ ಒಳಗಾಗಿ ದೇಶ- ವಿದೇಶಗಳಲ್ಲಿ ಆಸ್ಪತ್ರೆಗೆ ದಾಖಲಾಗಿ ಸದ್ಯ ತಮ್ಮ ಗೋವಾ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರ್ರಿಕರ್ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಬಿಜೆಪಿ ಅಧ್ಯಕ್ಷ ವಿನಯ್ ತೆಂಡೂಲ್ಕರ್ ಹೇಳಿದ ಮಾರನೆಯ ದಿನವೇ ಸರ್ದೇಸಾಯಿ ಈ ಮಾತುಗಳನ್ನು ಆಡಿರುವುದು ಗಮನಾರ್ಹ.
‘ನಾನೊಬ್ಬ ಬೂಟಾಟಿಕೆಯ ವ್ಯಕ್ತಿ ಅಲ್ಲ. ನೇರವಾಗಿ ವಿಷಯ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಗಳ ಅನಾರೋಗ್ಯ ನನ್ನ ಹಾಗೂ ಸರ್ಕಾರದ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಗೋವಾ ಕೃಷಿ ಸಚಿವರಾಗಿರುವ ಸರ್ದೇಸಾಯಿ ಸುದ್ದಿಗಾರರಿಗೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.