
ಸುಳ್ಯ (ನ.10): ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಶ್ರೀರಾಮುಲು ವೀರಾವೇಶದ ಭಾಷಣ ಮಾಡುತ್ತಾ, ಯಡವಟ್ಟು ಮಾಡಿಕೊಂಡಿದ್ದಾರೆ. ಏನೋ ಹೇಳಲು ಹೋಗಿ ಇನ್ನೇನೋ ಹೇಳಿ ಸಂಸದ ಶ್ರೀರಾಮಲು ಮುಜುಗರಕ್ಕೊಳಗಾಗಿದ್ದಾರೆ.
‘ಮೊನ್ನೆ ಮೊನ್ನೆ ಶೋಭಾ ಕರಂದ್ಲಾಜೆ ಶೋಭಾ, ಬಿಎಸ್ವೈ, ಡಿವಿಎಸ್ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತ ಕೆಲಸ ಮಾಡಿದ್ದರು. ಇದನ್ನು ನೀವೆಲ್ಲರೂ ನೋಡಿದ್ದೀರಿ ಎಂದು ಭಾಷಣದ ವೇಳೆ ಸಂಸದ ಶ್ರೀರಾಮುಲು ಯಡವಟ್ಟು ಹೇಳಿಕೆ ನೀಡಿದ್ದಾರೆ. ಶ್ರೀರಾಮುಲು ಮಾತು ಕೇಳಿದ ತಕ್ಷಣ ವೇದಿಕೆಯಲ್ಲಿದ್ದ ಬಿಜೆಪಿ ನಾಯಕರು ಕಂಗಾಲಾಗಿದ್ದಾರೆ. ಒಟ್ಟಿನಲ್ಲಿ ಶ್ರೀರಾಮುಲು ಏನೋ ಹೇಳಲು ಹೋಗಿ ಇನ್ನೇನೋ ಆಗಿ ಬಿಜೆಪಿಗೆ ಮುಜುಗರವಾಗುವಂತೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.