ಹಿಂದೂ ನಾಯಕರ ಹತ್ಯೆ ಮಾಡಿಸಿದ್ದು ಬಿಎಸ್'ವೈ ಅಂತೆ! ಶ್ರೀರಾಮುಲು ಮಾತಿನಿಂದ ಬಿಜೆಪಿ ಕಂಗಾಲು

By Suvarna Web DeskFirst Published Nov 10, 2017, 5:32 PM IST
Highlights

ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ  ಶ್ರೀರಾಮುಲು ವೀರಾವೇಶದ ಭಾಷಣ ಮಾಡುತ್ತಾ,  ಯಡವಟ್ಟು ಮಾಡಿಕೊಂಡಿದ್ದಾರೆ.  ಏನೋ ಹೇಳಲು ಹೋಗಿ ಇನ್ನೇನೋ ಹೇಳಿ ಸಂಸದ ಶ್ರೀರಾಮಲು ಮುಜುಗರಕ್ಕೊಳಗಾಗಿದ್ದಾರೆ.

ಸುಳ್ಯ (ನ.10):  ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ  ಶ್ರೀರಾಮುಲು ವೀರಾವೇಶದ ಭಾಷಣ ಮಾಡುತ್ತಾ,  ಯಡವಟ್ಟು ಮಾಡಿಕೊಂಡಿದ್ದಾರೆ.  ಏನೋ ಹೇಳಲು ಹೋಗಿ ಇನ್ನೇನೋ ಹೇಳಿ ಸಂಸದ ಶ್ರೀರಾಮಲು ಮುಜುಗರಕ್ಕೊಳಗಾಗಿದ್ದಾರೆ.

‘ಮೊನ್ನೆ ಮೊನ್ನೆ ಶೋಭಾ ಕರಂದ್ಲಾಜೆ ಶೋಭಾ, ಬಿಎಸ್​ವೈ, ಡಿವಿಎಸ್ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತ ಕೆಲಸ ಮಾಡಿದ್ದರು.  ಇದನ್ನು ನೀವೆಲ್ಲರೂ ನೋಡಿದ್ದೀರಿ ಎಂದು   ಭಾಷಣದ ವೇಳೆ ಸಂಸದ ಶ್ರೀರಾಮುಲು ಯಡವಟ್ಟು ಹೇಳಿಕೆ ನೀಡಿದ್ದಾರೆ.  ಶ್ರೀರಾಮುಲು ಮಾತು ಕೇಳಿದ ತಕ್ಷಣ ವೇದಿಕೆಯಲ್ಲಿದ್ದ ಬಿಜೆಪಿ ನಾಯಕರು ಕಂಗಾಲಾಗಿದ್ದಾರೆ. ಒಟ್ಟಿನಲ್ಲಿ ಶ್ರೀರಾಮುಲು ಏನೋ ಹೇಳಲು ಹೋಗಿ ಇನ್ನೇನೋ ಆಗಿ ಬಿಜೆಪಿಗೆ ಮುಜುಗರವಾಗುವಂತೆ ಮಾಡಿದ್ದಾರೆ.

 

 


 

click me!