ಬಿಜೆಪಿ ಸರ್ಕಾರ ಇನ್ನೂ 2 ವರ್ಷ ಇರಲಿ: ಜೆಡಿಎಸ್‌ ಶಾಸಕ!

Published : Sep 21, 2019, 10:55 AM IST
ಬಿಜೆಪಿ ಸರ್ಕಾರ ಇನ್ನೂ 2 ವರ್ಷ ಇರಲಿ: ಜೆಡಿಎಸ್‌ ಶಾಸಕ!

ಸಾರಾಂಶ

ಬಿಜೆಪಿ ಸರ್ಕಾರ ಇನ್ನೂ 2 ವರ್ಷ ಇರಲಿ ಎಂದ ಜೆಡಿಎಸ್‌ ಶಾಸಕ!| ನಾವ್ಯಾರೂ ಮಧ್ಯಂತರ ಚುನಾವಣೆ ಬಯಸುತ್ತಿಲ್ಲ| ದೇವೇಗೌಡ ಹೇಳಿಕೆಗೆ ನಾಡಗೌಡ ವ್ಯತಿರಿಕ್ತ ಮಾತು

ಬೆಂಗಳೂರು[ಸೆ.21]: ನಾವ್ಯಾರೂ ಮಧ್ಯಂತರ ಚುನಾವಣೆ ಬಯಸುತ್ತಿಲ್ಲ. ಬಿಜೆಪಿ ಸರ್ಕಾರ ಇನ್ನೂ ಎರಡು ವರ್ಷ ಕೆಲಸ ಮಾಡಲಿ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್‌ ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಪದೇ ಪದೇ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆಯಿದೆ ಎಂಬ ಹೇಳಿಕೆ ನೀಡುತ್ತಿರುವ ಹೊತ್ತಿನಲ್ಲಿ ಅವರದೇ ಪಕ್ಷದ ಶಾಸಕ ವ್ಯತಿರಿಕ್ತ ಹೇಳಿಕೆ ನೀಡಿರುವುದು ಕುತೂಹಲಕರವಾಗಿದೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವರ್ಷಕ್ಕೊಂದು ಚುನಾವಣೆ ನಡೆಯುವುದು ಸೂಕ್ತವಲ್ಲ. ಗೊಂದಲದಿಂದ ನಮ್ಮ ಸರ್ಕಾರ ಬಿದ್ದು ಹೋಯಿತು ಎಂದರು.

ಮಧ್ಯಂತರ ಚುನಾವಣೆ ಬರುತ್ತದೆ ಎಂದು ನಿರ್ದಿಷ್ಟವಾಗಿ ಹೇಳುವುದು ಕಷ್ಟ. ಒಂದೇ ವರ್ಷದಲ್ಲಿ ಎರಡೆರಡು ಚುನಾವಣೆ ಎದುರಿಸುವುದು ಜನಪ್ರತಿನಿಧಿಗಳಿಗೆ ಕಷ್ಟವಾಗುತ್ತದೆ. ಹೀಗಾಗಿ ಬಿಜೆಪಿ ಸರ್ಕಾರ ಪತನವಾಗಬಾರದು. ಇನ್ನೂ ಎರಡು ವರ್ಷ ಕೆಲಸ ಮಾಡಲಿ ಎನ್ನುವ ಬಯಕೆ ಇದೆ. ಆದರೆ, ನಾವು ಈ ರೀತಿ ಹೇಳಿದರೆ ಬಿಜೆಪಿ ಪರ ಒಲವಿದೆ ಎಂದು ಅಲ್ಲ ಎಂದು ಸ್ಪಷ್ಟಪಡಿಸಿದರು.

ನೆರೆ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆ ಅನುದಾನ ಬಂದಿಲ್ಲ. ಈ ಬಗ್ಗೆ ಅಸಮಾಧಾನ ನಮಗೂ ಇದೆ. ಕೇಂದ್ರದಲ್ಲಿ ಅವರದೇ ಸರ್ಕಾರ ಇದ್ದರೂ ಅನುದಾನ ನೀಡಿಲ್ಲ. ಇದರಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೂ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಬಂಧಗಳು ಸರಿ ಇಲ್ಲವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ನಾಡಗೌಡ ಅನುಮಾನ ವ್ಯಕ್ತಪಡಿಸಿದರು.

ಜೆಡಿಎಸ್‌ ಶಾಸಕರು ಬಿಜೆಪಿಗೆ ಹೋಗುವ ವದಂತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಯಾವುದೇ ಸೂಚನೆ ಇಲ್ಲ. ಪಕ್ಷದಲ್ಲಿ ಸಣ್ಣ ಪುಟ್ಟಅಸಮಾಧಾನಗಳು ಇರುವುದು ಸಹಜ. ಅವುಗಳನ್ನು ನಮ್ಮ ವರಿಷ್ಠರಾದ ದೇವೇಗೌಡರು ಬಗೆಹರಿಸುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ