
ಬೆಂಗಳೂರು: ನಮೋ ಎಂದರೆ ‘ನಮಗೆ ಮೋಸ’ ಎಂದು ವ್ಯಾಖ್ಯಾನಿಸಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಗರಂ ಆಗಿದ್ದು ಈ ರೀತಿ ಪ್ರತಿಕ್ರಿಯಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸೀದಾ ರುಪಯ್ಯಾ ಎಂದು ವ್ಯಾಖ್ಯಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ತಿರುಗೇಟು ನೀಡಿರುವ ಕಾಂಗ್ರೆಸ್, ನಮೋ (ನರೇಂದ್ರ ಮೋದಿ) ಎಂಬುದನ್ನು ‘ನಮಗೆ ಮೋಸ’ ಎಂದು ವ್ಯಾಖ್ಯಾನಿಸುವ ಮೂಲಕ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೋಸ ಮಾಡುತ್ತ ಬಂದಿದೆ ಎಂದು ಹೇಳಿತ್ತು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ದೇಶದ ಬ್ಯಾಂಕ್ಗಳ ಹಣ ವನ್ನು ಲಪಟಾಯಿಸಿಕೊಂಡು ಹೋಗಲು ವಂಚಕ ಉದ್ಯಮಿಗಳಿಗೆ ಮೋದಿ ಅವಕಾಶ ಕೊಟ್ಟಿದ್ದಾರೆ. ಇಂತಹ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಬಂದು ಅಷ್ಟು ದುಡ್ಡು ಕೊಟ್ಟಿದ್ದೇವೆ, ಇಷ್ಟು ದುಡ್ಡು ಕೊಟ್ಟಿದ್ದೇವೆ ಎಂದು ಸುಳ್ಳು ಹೇಳುತ್ತಾರೆ. ಏಕೆಂದರೆ, ಕೇಂದ್ರದಿಂದ ಅವರು ಹೇಳುತ್ತಿರುವಷ್ಟು ಹಣ ರಾಜ್ಯಕ್ಕೆ ಇನ್ನೂ ಬಂದೇ ಇಲ್ಲ. ಹೀಗಿದ್ದರೂ ಸುಳ್ಳು ಹೇಳುವ ಮೂಲಕ ನಮೋ (ನಮಗೆ ಮೋಸ) ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.