ಮುಂದಿನವಾರದಿಂದ ಬಿಜೆಪಿಯಲ್ಲಿ ಜಾವಡೇಕರ್ ದರ್ಬಾರ್ ಶುರು

Published : Aug 28, 2017, 06:36 PM ISTUpdated : Apr 11, 2018, 12:37 PM IST
ಮುಂದಿನವಾರದಿಂದ ಬಿಜೆಪಿಯಲ್ಲಿ ಜಾವಡೇಕರ್ ದರ್ಬಾರ್ ಶುರು

ಸಾರಾಂಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಸಂಚಲನ ಉಂಟಾಗಿದ್ದು, ಪಕ್ಷದ ಚಟುವಟಿಕೆಯನ್ನು ಇನ್ನಷ್ಟು ಬಿರುಸುಗೊಳಿಸಲು ಪಕ್ಷದ ನೂತನ ಚುನಾವಣಾ ಉಸ್ತುವಾರಿಯಾಗಿ ನೇಮಕವಾಗಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸೆ.04 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ನವದೆಹಲಿ (ಆ.28): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಸಂಚಲನ ಉಂಟಾಗಿದ್ದು, ಪಕ್ಷದ ಚಟುವಟಿಕೆಯನ್ನು ಇನ್ನಷ್ಟು ಬಿರುಸುಗೊಳಿಸಲು ಪಕ್ಷದ ನೂತನ ಚುನಾವಣಾ ಉಸ್ತುವಾರಿಯಾಗಿ ನೇಮಕವಾಗಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸೆ.04 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಅಮಿತ್ ಶಾ ಸೂಚನೆಯಂತೆ ಪ್ರಕಾಶ್ ಜಾವಡೇಕರ್ ಪಕ್ಷದ ರಾಜ್ಯ ವ್ಯವಹಾರಗಳ ಮೇಲೆ ನಿಗಾ ವಹಿಸಲಿದ್ದಾರೆ. ಉಸ್ತುವಾರಿಯಾಗಿ ನೇಮಗಗೊಂಡ ಮೊದಲ ಬಾರಿಗೆ ಸೆ.04 ರಂದು ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಮುಖಂಡರೊಂದಿಗೆ ಸುದೀರ್ಘ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಬಿಜೆಪಿ ರಾಜಕೀಯ ವ್ಯಬಹಾರಗಳ ಸಮಿತಿ ಸಭೆ ಸೆ.04 ರಂದು ನಿಗದಿಯಾಗಿದ್ದು, ಜಾವಡೇಕರ್ ನೇತೃತ್ವದಲ್ಲಿ ಇಡೀ ದಿನ ಸಭೆ ನಡೆಯಲಿದೆ. ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅಮಿತ್ ಶಾ ಭೇಟಿ ನೀಡಿ ವಾರದೊಳಗೆ ಜಾವಡೇಕರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಿದ್ದರು. ಕೂಡಲೇ ಅವರು ರಾಜ್ಯಕ್ಕೆ ಆಗಮಿಸಿ ತಮ್ಮ ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದು ನೋಡಿದರೆ ರಾಷ್ಟ್ರೀಯ ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?