
ಚಿಕ್ಕಮಗಳೂರು, (ನ.07): ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯ ಮತ್ತೊಂದು ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಶಾಸಕ ಬಿಜೆಪಿ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಬಿಜೆಪಿ ಜನಾರ್ದನ ರೆಡ್ಡಿಯವರ ಮೇಲೆ ಅವಲಂಬಿತವಾಗಿ ರಾಜಕೀಯ ಮಾಡುತ್ತಿಲ್ಲ. ಅವರ ಮೇಲೆ ಮೊಕದ್ದಮೆ ದಾಖಲಾದ ನಂತರ ಪಾರ್ಟಿ ಅವರಿಗೆ ಯಾವುದೇ ಜವಾಬ್ದಾರಿ ಕೊಟ್ಟಿಲ್ಲ. ಕಳೆದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯಲ್ಲೂ ಅವರ ಪಾತ್ರವಿರಲಿಲ್ಲ.
ನಾಪತ್ತೆಯಾದ ಈ ವ್ಯಕ್ತಿ ಸಿಕ್ಕರೆ ರೆಡ್ಡಿ ಸಾಮ್ರಾಜ್ಯ ಪತನ?
ಜನಾರ್ದನ ರೆಡ್ಡಿಯವರಿಗೆ ಏನೋ ಮಾಡಿರುವುದರಿಂದ ಬಿಜೆಪಿಯನ್ನು ಮಣಿಸುತ್ತೇವೆ ಅಂತ ಕಾಂಗ್ರೆಸ್-ಜೆಡಿಎಸ್ ನವರು ಹೊಂಚು ಹಾಕಿದ್ದಾರೆ. ಆದರೆ ಬಿಜೆಪಿ ಜನಾರ್ದನ ರೆಡ್ಡಿಯವರ ಮೇಲೆ ಅಲಂಬಿತವಾಗಿರೋ ಪಾರ್ಟಿಯಲ್ಲ ಅಂತ ಅವರಿಗೆ ಅರ್ಥವಾಗುತ್ತದೆ ಎಂದು ಸಿ.ಟಿ ರವಿ ಕುಟುಕಿದರು.
ಬಂಧನ ಭೀತಿ: ರೆಡ್ಡಿ ಮುಂದಿರುವ 2 ಆಯ್ಕೆಗಳು
ಬಿಜೆಪಿಯನ್ನ ಮಣಿಸುವ ಕಾರಣಕ್ಕೆ ಜನಾರ್ದನ ರೆಡ್ಡಿಯವರನ್ನ ಟಾರ್ಗೆಟ್ ಮಾಡಿದ್ದರೆ.ಅದನ್ನು ರೆಡ್ಡಿ ಎದುರಿಸುತ್ತಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.