ಅಧಿಕಾರ ಹಿಡಿಯಲು ಆಪರೇಷನ್ ಕಮಲ ನಡೆಸುತ್ತಿದೆ ಬಿಜೆಪಿ?

Published : Jun 26, 2018, 05:25 PM ISTUpdated : Jun 26, 2018, 05:33 PM IST
ಅಧಿಕಾರ ಹಿಡಿಯಲು ಆಪರೇಷನ್ ಕಮಲ ನಡೆಸುತ್ತಿದೆ ಬಿಜೆಪಿ?

ಸಾರಾಂಶ

ಕಾಂಗ್ರೆಸ್-ಜೆಡಿಎಸ್ ಸರಕಾರ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದೆ. ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿಕೊಂಡು ತಿರುಗುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರವನ್ನು ಹಳಿಗೆ ತರಲು ಯತ್ನಿಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿದ್ದು, ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ. ಇದನ್ನು ಖುದ್ದು ಡಿಕೆಶಿ ಒಪ್ಪಿಕೊಂಡಿದ್ದಾರೆ.

ರಾಮನಗರ: ಅಧಿಕಾರ ಹಿಡಿಯುವಲ್ಲಿ ವಿಫಲವಾದ ಬಿಜೆಪಿ ಸುಮ್ಮನೆ ಕುಳಿತಿಲ್ಲ. ಏನಾದರೂ ಮಾಡಿ, ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಆಪರೇಷನ್ ಕಮಲ ನಡೆಸಲು ಹೊಂಚು ಹಾಕುತ್ತಿದೆ!

ಎಸ್. ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರೇ ಆಪರೇಷನ್ ಕಮಲದ ಮುನ್ಸೂಚನೆ ನೀಡಿದ್ದಾರೆ. ಮಂಗಳವಾರ ರಾಮನಗರ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹೋದರ ಡಿ.ಕೆ.ಸುರೇಶ್ ಅಭ್ಯರ್ಥಿಯಾಗಲಿದ್ದಾರೆಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಸಿಡಿಸಿದ ಸ್ಫೋಟಕ ಬಾಂಬ್!

'ಐಟಿ ದಾಳಿ ಹಿನ್ನಲೆ ಜೈಲಿಗೆ ಹೋಗಲು ನಾನು ಸಿದ್ಧ. ತಪ್ಪು ಮಾಡಿದರೆ ಮಾತ್ರ ಹೆದರಬೇಕು. ನಾನು ತಪ್ಪೇ ಮಾಡಿಲ್ಲ, ಏಕೆ ಹೆದರಲಿ? ಹೆದರಿಸಿ ಬೆದರಿಸಿ ನಮ್ಮನ್ನೂ ಏನು ಮಾಡಲೂ ಸಾಧ್ಯವಿಲ್ಲ. ನನ್ನ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆಯುತ್ತಿದೆ.ಅದ್ಯಾವುದಕ್ಕೂ ನಾವು ಹೆದರುವವರಲ್ಲ. ಪ್ರೀತಿ ವಿಶ್ವಾಸದಿಂದ ಮಾತ್ರ ಗೆಲ್ಲಲು ಮಾತ್ರ ಸಾಧ್ಯ,' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ರೈತರಿಗೆ ಅನುಕೂಲ ಮಾಡುವುದೇ ಗುರಿ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್