
ನವದೆಹಲಿ(ನ.23): ಇತ್ತೀಚೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವಾಗ, `ಮೋದಿ ಅವರು ಗುಜರಾತ್ ನಲ್ಲಿ ಮಿಂಚಿ ಮರೆಯಾಗುವ ಜಾದೂಗಾರ' ಎಂದು ಕುಟುಕಿದ್ದರು.
ಇದನ್ನೇ ಸವಾಲಾಗಿ ಸ್ವೀಕರಿಸಿರುವ ಬಿಜೆಪಿ, ಈಗ 36 `ಜಾದೂಗಾರರ ತಂಡ'ಗಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಮೂಲಕ ಹೊಸದಾದ ಪ್ರಯತ್ನವೊಂದನ್ನು ನಡೆಸಲು ತೀರ್ಮಾನಿಸಿದೆ. ಈ ಜಾದೂಗಾರರ ತಂಡಗಳು 144 ಕ್ಷೇತ್ರಗಳ 800 ಗ್ರಾಮಗಳಲ್ಲಿ ಸಂಚರಿಸಲಿವೆ. ಮುಂದಿನ 20 ದಿನ ಜಾದೂ ಪ್ರದರ್ಶನವನ್ನು ನೀಡುತ್ತ ವಿಶಿಷ್ಟ ಬಗೆಯಲ್ಲಿ ಬಿಜೆಪಿ ಪರ ಜಾದೂಗಾರರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.