ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ: ಸರ್ವಪಕ್ಷ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸಲಹೆ

Published : Sep 28, 2016, 06:09 AM ISTUpdated : Apr 11, 2018, 12:49 PM IST
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ: ಸರ್ವಪಕ್ಷ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸಲಹೆ

ಸಾರಾಂಶ

ಬೆಂಗಳೂರು(ಸೆ. 28): ಕಳೆದ ವಾರ ವಿಧಾನಮಂಡಲದಲ್ಲಿ ಕೈಗೊಂಡ 'ನಿರ್ಣಯ'ಕ್ಕೆ ಬದ್ಧವಾಗಿರಬೇಕೆಂದು ವಿಪಕ್ಷಗಳು ರಾಜ್ಯ ಸರಕಾರಕ್ಕೆ ಸಲಹೆ ನೀಡಿವೆ. ಪರಿಸ್ಥಿತಿ ಕರ್ನಾಟಕಕ್ಕೆ ಅನುಕೂಲವಾಗಿಲ್ಲ. ಪ್ರಕೃತಿ ಕೂಡ ಪ್ರತಿಕೂಲವಾಗಿದೆ. ಕಾವೇರಿ ಜಲಾಶಯಗಳಲ್ಲಿ ನೀರು ಇಲ್ಲ. ಕುಡಿಯಲಷ್ಟೇ ನೀರು ಬಳಸುತ್ತೇವೆಂಬ 'ನಿರ್ಣಯ'ಕ್ಕೆ ಬದ್ಧವಾಗಿರೋಣ. ನಾಳೆಯವರೆಗೆ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಿಳಿಸಿವೆ. ಇಂದು ಸಿಎಂ ಕರೆದ ಸರ್ವಪಕ್ಷ ಸಭೆಯಲ್ಲಿ ವಿಧಾನಮಂಡಲದ 'ನಿರ್ಣಯ'ಕ್ಕೆ ಬದ್ಧವಾಗಿರಲು ಸರ್ವಸಮ್ಮತಿ ವ್ಯಕ್ತವಾಯಿತು. ನಾಳೆ, ಕೇಂದ್ರ ಸರಕಾರದ ಮಧ್ಯಸ್ಥಿಕೆಯಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಸಂಧಾನ ಸಭೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?