
ಕೊಡಗು[ಜೂ. 04] ಅಪ್ಪ ಮಕ್ಕಳ ಜೊತೆ ಯಾರು ಇರೋಕೆ ಆಗಲ್ಲ. ಜೆಡಿಎಸ್ ನಲ್ಲಿ ಉಸಿರುಕಟ್ಟುವ ವಾತವಾರಣವಿದೆ ಎಂದು ಬಿಜೆಪಿ ನಾಯಕ ಎ. ಮಂಜು ಹೇಳಿದ್ದಾರೆ.
ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಪ್ರತಿಕ್ರಿಯೆ ನೀಡಿದ ಮಂಜು, ಅಧಿಕಾರ ಇರಬಹುದು ಅಥವಾ ಇನ್ನೊಂದು ಇರಬಹುದು ಕೇವಲ ಅವರ ಕುಟುಂಬಕ್ಕೆ ಸೀಮಿತ ಮಾಡಿಕೊಳ್ತಾರೆ. ಅರ್ಹತೆ ಇರುವವರಿಗೆ ಅಧಿಕಾರ ಕೊಡುವುದಿಲ್ಲ. ಅಧಿಕಾರವಿಲ್ಲದೇ ಅಧ್ಯಕ್ಷನಾಗಿಯೂ ಜವಾಬ್ದಾರಿ ನಿರ್ವಹಿಸಲು ಆಗದ ಹಿನ್ನೆಲೆಯಲ್ಲಿ ನೊಂದು ವಿಶ್ವನಾಥ್ ರಾಜೀನಾಮೆ ಕೊಟ್ಟಿದ್ದಾರೆ ಎಂದರು.
ರಾಜೀನಾಮೆ ಕೊಟ್ಟ ವಿಶ್ವನಾಥ್ ಹೇಳಿದ್ದೇನು?
ಕಾಂಗ್ರೆಸ್ ಪಕ್ಷದಲ್ಲಿ ‘ಜೀ ಹೂಜೂರ್’ ಗಳಿಗೆ ಮಾತ್ರ ಅವಕಾಶ ಸಿಗ್ತಿದೆ. ಕೆಲಸ ಮಾಡೋರಿಗೆ, ಹಿರಿಯರಿಗೆ ಗೌರವ ಸಿಗುತ್ತಿಲ್ಲ. ನಿಜವಾಗಿ ಪಕ್ಷ ಕಟ್ಟೋರಿಗೆ ಪಕ್ಷ ಬೆಳೆಸುವಂತವರಿಗೆ ಸ್ಥಾನಮಾನ ಕೊಡಲ್ಲ. ಮೈತ್ರಿ ಸರ್ಕಾರವನ್ನ ನಾವು ಕೆಡವಲು ಹೋಗುವುದಿಲ್ಲ ಎಂದು ಹೇಳಿದರು.
ಕೇಂದ್ರದಲ್ಲಿ, ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆದುಕೊಂಡಿದೆ.. ಕುಮಾರಸ್ವಾಮಿಯವರೇ ನೈತಿಕವಾಗಿ ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೆಯದು ಎಂದು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.