
ಹಾಸನ [ಜು.16]: ಮೈತ್ರಿ ಸರ್ಕಾರ ಸಂಕಷ್ಟದಲ್ಲಿದ್ದರೂ ಲೋಕೋಪಯೋಗಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ಮಿತಿಯಿಲ್ಲದೇ ನಡೆಯುತ್ತಿದೆ. ಸಚಿವ ಎಚ್.ಡಿ. ರೇವಣ್ಣ ಅವರು ಲೋಕೋಪಯೋಗಿ ಮಂತ್ರಿಯಲ್ಲ, ಅವರು ವರ್ಗಾವಣೆ (ಟ್ರಾನ್ಸ್ಫರ್) ಖಾತೆ ಸಚಿವರಾಗಿದ್ದಾರೆ ಎಂದು ಮಾಜಿ ಸಚಿವ ಎ. ಮಂಜು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ರೋಮ್ ಹೊತ್ತಿ ಉರಿಯುತ್ತಿದ್ದಾಗ ಅಲ್ಲಿನ ದೊರೆಯಾಗಿದ್ದಂತಹ ನೀರೋ ಪಿಟೀಲು ಕೊಯ್ದಿದ್ದ ಅನ್ನುವಂತೆ ಸಚಿವ ಎಚ್.ಡಿ. ರೇವಣ್ಣ ರಾಜ್ಯದ ಮೈತ್ರಿ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿರುವ ಸಂದರ್ಭದಲ್ಲಿ ನೂರಾರು ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಪ್ಪ-ಮಕ್ಕಳ ಪಕ್ಷದ ಪರವಾಗಿ ನಿಲ್ಲಬೇಡಿ. ನಿಂತರೆ ನಾನು ನಿಮ್ಮ ಜೊತೆ ಇರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಿದ್ದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಕೂಡ ಅಪ್ಪ- ಮಕ್ಕಳನ್ನು ನಂಬಿದರೆ ಬೀದಿಗೆ ಬರ್ತೀರಿ ಅಂತ ಸದನದಲ್ಲಿ ಹೇಳಿದ್ದರು. ಆ ಮಾತಿನಂತೆ ಡಿ.ಕೆ.ಶಿವಕುಮಾರ್ ಬೀದಿಯಲ್ಲಿ ನಿಂತುಕೊಂಡರು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.