ಮತ್ತೆ ಸಿಎಂ ಆಗುತ್ತಾರಾ ಬಿಎಸ್.ಯಡಿಯೂರಪ್ಪ..?

Published : Jun 27, 2018, 07:55 AM IST
ಮತ್ತೆ ಸಿಎಂ ಆಗುತ್ತಾರಾ ಬಿಎಸ್.ಯಡಿಯೂರಪ್ಪ..?

ಸಾರಾಂಶ

ನರೇಂದ್ರ ಮೋದಿ ಮುಂದಿನ ಬಾರಿಯೂ ಪ್ರಧಾನಿ ಆಗಬೇಕು ಹಾಗೂ ಬಿ.ಎಸ್‌. ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಹರಕೆ ಹೊತ್ತ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮಂಗಳವಾರ ಬೈಂದೂರಿನಿಂದ 

ಬೈಂದೂರು: ನರೇಂದ್ರ ಮೋದಿ ಮುಂದಿನ ಬಾರಿಯೂ ಪ್ರಧಾನಿ ಆಗಬೇಕು ಹಾಗೂ ಬಿ.ಎಸ್‌. ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಹರಕೆ ಹೊತ್ತ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮಂಗಳವಾರ ಬೈಂದೂರಿನಿಂದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯಕ್ಕೆ 25 ಕಿ.ಮೀ. ಪಾದಯಾತ್ರೆ ನಡೆಸಿದರು. ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಸುಕುಮಾರ್‌ ಶೆಟ್ಟಿತಮ್ಮ ನೂರಾರು ಅಭಿಮಾನಿ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಕೊಲ್ಲೂರಿಗೆ ಕಾಲ್ನಡಿಗೆಯಲ್ಲಿ ಆಗಮಿಸಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ಮಂಗಳವಾರ ಮುಂಜಾನೆ 4.30ಕ್ಕೆ ಬೈಂದೂರಿನಲ್ಲಿರುವ ತಮ್ಮ ಮನೆಯಿಂದ ಹೊರಟ ಶಾಸಕರು ಮತ್ತು ಅಭಿಮಾನಿಗಳು 10.30ಕ್ಕೆ ಕೊಲ್ಲೂರು ತಲುಪಿದರು. ಅವರೊಂದಿಗೆ ಸುಮಾರು 300 ಮಂದಿ ಜೊತೆಗಿದ್ದರು. ನಡುವೆ ನಾಲ್ಕೆ ೖದು ಬಾರಿ ಭಾರೀ ಮಳೆ ಕೂಡ ಸುರಿಯಿತು. ಕಾರ್ಯಕರ್ತರು ಕೊಡೆ ಹಿಡಿಯುವುದಕ್ಕೆ ಮುಂದೆ ಬಂದರಾದರೂ ಶಾಸಕರು ಪಂಚೆಯನ್ನು ಎತ್ತಿ ಕಟ್ಟಿ, ಮಳೆಯಲ್ಲಿ ನೆನೆದುಕೊಂಡೇ ಪಾದಯಾತ್ರೆ ನಡೆಸಿದರು. ಕೊಲ್ಲೂರಿಗೆ ಆಗಮಿಸಿದ ಶಾಸಕರು ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡಿ ದೇವಿ ದರ್ಶನ, ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!