ಅಕ್ಟೋಬರ್‌ ಒಳಗೆ ಬಿಎಸ್‌ವೈ ಮತ್ತೆ ಕರ್ನಾಟಕ ಸಿಎಂ

Published : Jul 05, 2018, 07:16 AM IST
ಅಕ್ಟೋಬರ್‌ ಒಳಗೆ ಬಿಎಸ್‌ವೈ ಮತ್ತೆ ಕರ್ನಾಟಕ ಸಿಎಂ

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಅಕ್ಟೋಬರ್ ತಿಂಗಳ ಒಳಗೆ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ತಿಪಟೂರು :  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಜಾತಕ, ಕುಂಡಲಿ ಚೆನ್ನಾಗಿದ್ದು, ಮುಂದಿನ ಅಕ್ಟೋಬರ್‌ 2ನೇ ವಾರದೊಳಗೆ ಅವರು ರಾಜ್ಯದ ಮುಖ್ಯಮಂತ್ರಿಗಳಾಗುವ ಯೋಗವಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ತುಮಕೂರು ಜಿಲ್ಲೆಯ ಸೋಮೆಕಟ್ಟೆಕಾಡಸಿದ್ದೇಶ್ವರ ಮಠದ ನೂತನ ಶಿಲಾಮಠ ಲೋಕಾರ್ಪಣ ಸಮಾರಂಭದ ನಾಲ್ಕನೇ ದಿನವಾದ ಬುಧವಾರ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ವಿ.ಸೋಮಣ್ಣ ಅವರು, ಯಡಿಯೂರಪ್ಪ ರಾಜ್ಯಕಂಡ ಅತ್ಯುತ್ತಮ ನಾಯಕರಾಗಿದ್ದು, ಎಲ್ಲ ವರ್ಗದ ಜನರಿಗೆ ಸಮಾನತೆ ಕೊಟ್ಟವ್ಯಕ್ತಿಯಾಗಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಬಿಎಸ್‌ವೈ ಅಧಿಕಾರವನ್ನು ಪೂರ್ಣಗೊಳಿಸಲಾಗಲಿಲ್ಲ. ಅವರ ದೂರದೃಷ್ಟಿರಾಜ್ಯದ ಜನರಿಗೆ ಸಮರ್ಪಣೆ ಮಾಡಬೇಕೆಂಬ ಉದ್ದೇಶ ಅವರಲ್ಲಿದೆ. ಆದರೆ ಕೇವಲ 37 ಸ್ಥಾನಗಳನ್ನು ಪಡೆದುಕೊಂಡವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಪವಿತ್ರ ಕ್ಷೇತ್ರಕ್ಕೆ ಯಡಿಯೂರಪ್ಪನವರು ಮತ್ತೊಮ್ಮೆ ಭೇಟಿ ನೀಡುವುದರೊಳಗೆ ಮುಖ್ಯಮಂತ್ರಿಗಳಾಗಿರುತ್ತಾರೆಂಬ ನಂಬಿಕೆಯಿದೆ ಎಂದರು.

ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಂಸದ ಬಿ.ವೈ.ರಾಘವೇಂದ್ರ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ: ಕಾವೇರಿ 5ನೇ ಹಂತದ ಪೈಪ್‌ಲೈನ್‌ನಲ್ಲಿ ಸೋರಿಕೆ!
ಚಿನ್ನದ ಬೆಲೆ ಲಕ್ಷ ದಾಟಿದ ಬೆನ್ನಲ್ಲೇ ಕರ್ನಾಟಕದ ಈ ಜಿಲ್ಲೆಗೆ ಜಾಕ್‌ಪಾಟ್‌, ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!