ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲಿ - ಸರ್ಕಾರ ನಡೆಸುತ್ತೇವೆ : BSY

Published : Jun 07, 2019, 12:53 PM ISTUpdated : Jun 07, 2019, 12:59 PM IST
ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲಿ - ಸರ್ಕಾರ ನಡೆಸುತ್ತೇವೆ : BSY

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬರ ಪ್ರವಾಸ ಆರಂಭ ಮಾಡಿದ್ದಾರೆ. ಅಲ್ಲದೇ ಇದೇ ವೇಳೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಬಗ್ಗೆಯೂ ಅವರು ಪ್ರಸ್ತಾಪ ಮಾಡಿದ್ದಾರೆ. 

ಹುಬ್ಬಳ್ಳಿ : ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಇದೊಂದು ಅರ್ಥವಿಲ್ಲದ ಕಾರ್ಯಕ್ರಮ ಎಂದು ಹೇಳಿದರು. 

ಹುಬ್ಬಳ್ಳಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬರ ಪ್ರವಾಸ ಆರಂಭ ಮಾಡಿದ್ದು, ಈ ವೇಳೆ ಮಾತನಾಡಿದ ಅವರು ಈ ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನವನ್ನು ನೀಡಿಲ್ಲ. ಗ್ರಾಮ ವಾಸ್ತವ್ಯ ಬಿಟ್ಟು ಬರಗಾಲ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ ಎಂದರು. 

ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ದೊಂಬರಾಟವಿದು. ರಾಜ್ಯದ ಜನ ಇದಕ್ಕೆಲ್ಲ ಬೆಲೆ ಕೊಡುವುದಿಲ್ಲ. ಜನರನ್ನು ವಂಚಿಸಿ ಪರಸ್ಪರ ಕಚ್ಚಾಟ, ಬಡಿದಾಟದಲ್ಲಿ ತೊಡಗಿದ್ದಾರೆ ಎಂದರು. 

ಇನ್ನು ಇದೇ ವೇಳೆ ಮಧ್ಯಂತರ ಚುನಾವಣೆ ಸಂಬಂಧ ನಿಖಿಲ್ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಬಿಎಸ್ ವೈ ಯಾವುದೇ ಕಾರಣಕ್ಕೂ ಚುನಾವಣೆ ನಡೆಯುವುದಿಲ್ಲ. ಅಧಿಕಾರ‌‌ ಮಾಡಲು ಆದರೆ ಮಾಡಲಿ, ಆಗದಿದ್ದರೆ ಬಿಟ್ಟು ಹೋಗಲಿ. ನಮಗೆ ಬಿಟ್ಟು ಕೊಡಲಿ ನಾವು ಅಧಿಕಾರ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಹೊಸ ಚುನಾವಣೆಗೆ ಹೋಗುವ ಪ್ರಶ್ನೆಯಿಲ್ಲ. ನಾವು ಅದನ್ನು ಒಪ್ಪುವುದೂ ಇಲ್ಲ. ಜನರ ಬಳಿ ಹೋಗಲು ಇನ್ನೂ ಐದುವರ್ಷ ಬಾಕಿಯಿದೆ. ಈ ಸರ್ಕಾರ ಬಹಳ ದಿನ ಇರುತ್ತೆ ಅಂತಾ ಯಾರಿಗೂ ವಿಶ್ವಾಸವಿಲ್ಲ ಎಂದರು. 

ಇನ್ನು ಕೇಂದ್ರ ಸರ್ಕಾರದಲ್ಲಿ ಲಿಂಗಾಯತರಿಗೆ ಅವಕಾಶ ವಿಚಾರದ ಸಂಬಂಧವೂ ಪ್ರತಿಕ್ರಿಯಿಸಿದ ಅವರು ಅದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟ ವಿಚಾರ ಎಂದರು. 

ಅಲ್ಲದೇ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಾರಾ ಎನ್ನುವ ಬಗ್ಗೆ ಬಿಎಸ್ ವೈ ಪ್ರತಿಕ್ರಿಯಿಸಿ ಅವರನ್ನು ನಮ್ಮ ಪಕ್ಷಕ್ಕೆ ಸೇರುವಂತೆ ಅಪ್ರೋಚ್ ಮಾಡಿಲ್ಲವೆಂದು ಯಡಿಯೂರಪ್ಪ ತಿಳಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್‌
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು