
ಶಿವಮೊಗ್ಗ : ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರಿಗಳು, ಮಂತ್ರಿಗಳು ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಗಳು ಸಿಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪ, ಸಚಿವ ಪುಟ್ಟರಂಗ ಶೆಟ್ಟಿ ಪಿಎ ಮೋಹನ್ ಹಣ ಸಾಗಿಸುವಾಗ ಸಿಕ್ಕಿ ಬಿದ್ದಿದ್ದಾನೆ. ಈ ನಿಟ್ಟಿನಲ್ಲಿ ತಕ್ಷಣವೇ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಬೇಕು. ಸಿಎಂ ಕುಮಾರಸ್ವಾಮಿ ನೈತಿಕ ಹೊಂಎ ಹೊತ್ತು ಸಚಿವ ಸ್ಥಾನದಿಂದ ಪುಟ್ಟರಂಗಶೆಟ್ಟಿಯವರನ್ನು ಕೈ ಬಿಡಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು 10 ಪರ್ಸೆಂಟ್ ಸರ್ಕಾರ ಎಂದಿದ್ದರು. ಇದು 20 ಪರ್ಸೆಂಟ್ ಸರ್ಕಾರ ಎಂದು ಸಾಬೀತಾಗಿದೆ. ಮೋಹನ್ ಹಣ ತೆಗೆದುಕೊಂಡು ಸಚಿವರ ಮನೆಗೆ ಹೋಗುವಾಗ ಸಿಕ್ಕಿ ಬಿದ್ದಿದ್ದು, ಇದರಿಂದ ಡೀಲ್ ಮಾಡಿರುವುದು ಪತ್ತೆ ಯಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರಫೆಲ್ ಡೀಲ್ ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ವೀರಪ್ಪ ಮೊಯ್ಲಿ ಯವರು ರಾಹುಲ್ ಗಾಂಧಿಯನ್ನು ಸಮರ್ಥಿಸಿ ಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ದೂರುತ್ತಿದ್ದಾರೆ. ಆದರೆ ರಾಜ್ಯದಲ್ಲಿಯೇ ದೊಡ್ಡ ದೊಡ್ಡ ಲೂಟಿಗಳಾಗುತ್ತಿವೆ ಎಂದರು.
ತೈಲದರ ಏರಿಕೆ ಸಮಂಜಸವಲ್ಲ : ಇನ್ನು ರಾಜ್ಯದಲ್ಲಿ ಪೆಟ್ರೋಲ್ ,ಡಿಸೆಲ್ ಮೇಲಿನ ತೆರಿಗೆ ಏರಿಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ ಬಿಎಸ್ ವೈ ದರ ಹೆಚ್ಚಳ ಮಾಡುತ್ತಿರುವುದು ಸಿಎಂ ಕುಮಾರಸ್ವಾಮಿ ಗೆ ಶೋಭೆ ತರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಸಿದರೂ ಈ ಸರ್ಕಾರ ಹೆಚ್ಚು ಮಾಡುತ್ತಿರುವುದು ಸರಿಯಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.