ಅಭಿವೃದ್ಧಿ ಕೆಲಸದಲ್ಲಿ ಹಿಂದುಳಿದ ಸರ್ಕಾರ : BSY ಗರಂ

Published : Jun 08, 2019, 12:55 PM IST
ಅಭಿವೃದ್ಧಿ ಕೆಲಸದಲ್ಲಿ ಹಿಂದುಳಿದ ಸರ್ಕಾರ : BSY ಗರಂ

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬರ ಅಧ್ಯಯನ ಕೈಗೊಂಡಿದ್ದು ಇದೀಗ ಕೊಪ್ಪಳ ಜಿಲ್ಲೆಯ ಹಿರೆಹಳ್ಳಕ್ಕೆ ಭೇಟಿ ನೀಡಿದ್ದಾರೆ.

ಕೊಪ್ಪಳ  :  ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಕೊಪ್ಪಳದ ಹಿರೇಹಳ್ಳಕ್ಕೆ ಭೇಟಿ ನೀಡಿದ್ದಾರೆ. 

ಭಕ್ತರ ಸಹಾಯದಿಂದ ಗವಿ ಸಿದ್ದೇಶ್ವರ ಸ್ವಾಮೀಜಿ ಸ್ವಚ್ಛ ಮಾಡಿದ ಹಿರೇಹಳ್ಳ ಸ್ಥಳಕ್ಕೆ ತೆರಳಿ ಬಿ.ಎಸ್.ಯಡಿಯೂರಪ್ಪ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು ಗವಿಸಿದ್ದೇಶ್ವರ ಸ್ವಾಮೀಜಿ ಎಲ್ಲ ಸ್ವಾಮೀಜಿಗಳಿಗೆ ಮೇಲ್ಪಂಕ್ತಿ ಎನ್ನುವಂತೆ ಕೆಲಸ ಮಾಡಿದ್ದಾರೆ. ಹಿರೇಹಳ್ಳವನ್ನು ಈ ರೀತಿ ಅಭಿವೃದ್ಧಿ ಮಾಡಿರುವುದು ಅಭಿನಂದನಾರ್ಹ. ಇಂತಹ ಸ್ವಾಮೀಜಿ ಪಡೆದ ನಾವೆಲ್ಲರೂ ಕೂಡ ಧನ್ಯರು ಎಂದರು. 

ಗವಿ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಇರುವ ಎಲ್ಲಾ ಮುನ್ನಾಲೋಚನೆ ಕೈಗೂಡಲಿದೆ. ಈ ಭಾಗದ ಜನತೆ ಸಾಥ್ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. 

ತುಂಗಭದ್ರಾ ಜಲಾಶಯದ ಹೂಳಿನ ಸಮಸ್ಯೆ ಸಮನಾಂತರ ಜಲಾಶಯದ ನಿರ್ಮಾಣ ವಿಚಾರದ ಬಗ್ಗೆಯೂ ಮಾತನಾಡಿದ ಬಿಎಸ್ ವೈ ಈ ಸರ್ಕಾರ ಯಾವ ಕೆಲಸವನ್ನೂ ಮಾಡುವುದಿಲ್ಲ. ಈ ಸರ್ಕಾರಕ್ಕೆ ನೀರಾವರಿ ಯೋಜನೆ ಬಗ್ಗೆ ಕಾಳಜಿ ಇಲ್ಲ. ಮುಂದಿನ ದಿನದಲ್ಲಿ ಎಲ್ಲಾ ಯೋಜನೆ ಕೈಗೂಡಲಿವೆ  ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್