ಗೋವಿಗೂ ರಾಖಿ ಕಟ್ಟಿದ ಬಿಜೆಪಿ ಶಾಸಕ!

Published : Aug 16, 2019, 10:39 AM IST
ಗೋವಿಗೂ ರಾಖಿ ಕಟ್ಟಿದ ಬಿಜೆಪಿ ಶಾಸಕ!

ಸಾರಾಂಶ

ರಕ್ಷಾ ಬಂಧನದ ದಿನ ಅಣ್ಣಂದಿರಿಗೆ ರಾಖಿ ಕಟ್ಟುವುದು ಸಹಜ. ಆದರೆ ಬಿಜೆಪಿ ಶಾಸಕರೋರ್ವರು ಗೋವಿಗೆ ರಾಖಿ ಕಟ್ಟಿದ್ದಾರೆ. 

ಲಕ್ನೋ [ಆ.16]:  ಅಣ್ಣ-ತಂಗಿಯರ ಸಂಬಂಧ ಬೆಸೆಯುವ ಹಿಂದೂಗಳ ಸಾಂಪ್ರದಾಯಿಕ ಹಬ್ಬ ರಕ್ಷಾ ಬಂಧನದ ದಿನ ಸೋದರಿಯರು ಅಣ್ಣ-ತಮ್ಮಂದಿರಿಗೆ ರಾಖಿ ಕಟ್ಟುತ್ತಾರೆ. 

ಇದರಲ್ಲಿ ವಿಶೇಷವೇನೂ ಇಲ್ಲ. ಆದರೆ, ಉತ್ತರ ಪ್ರದೇಶದ ಬಿಜೆಪಿ ಶಾಸಕ ಭುಕಲ್‌ ನವಾಜ್‌ ರಕ್ಷಾ ಬಂಧನದ ಪ್ರಯುಕ್ತ ಗೋವಿಗೆ ಪೂಜೆ ಸಲ್ಲಿಸಿ ರಾಖಿ ಕಟ್ಟಿದರು. 

ಲಖನೌನ ಕುಬಿಯಾಘಾಟ್‌ನಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾಗಿಯಾದ ಮಹಿಳೆಯರು ಮತ್ತು ಪುರುಷರು ಗೋವುಗಳಿಗೆ ರಾಖಿ ಕಟ್ಟಿದರು. ಅಲ್ಲದೆ, ಮಾಂಸಕ್ಕಾಗಿ ಗೋವುಗಳ ವಧೆ ಮಾಡುವುದರ ತಡೆ ಮತ್ತು ಗೋವು ಹಾಗೂ ಮನುಷ್ಯನ ನಡುವಿನ ಬಾಂಧವ್ಯದ ಜಾಗೃತಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರಂತೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!