ಪ್ರತ್ಯೇಕ ರಾಜ್ಯದ ಕೂಗು ಯಾಕೆ ಏಳುತ್ತದೆ? ಮಾಜಿ ಸಿಎಂ ಹೇಳಿದ ಸಂಶೋಧನೆ

Published : Dec 04, 2018, 04:30 PM ISTUpdated : Dec 04, 2018, 04:31 PM IST
ಪ್ರತ್ಯೇಕ ರಾಜ್ಯದ ಕೂಗು ಯಾಕೆ ಏಳುತ್ತದೆ? ಮಾಜಿ ಸಿಎಂ ಹೇಳಿದ ಸಂಶೋಧನೆ

ಸಾರಾಂಶ

ಹಂಪಿ ಉತ್ಸವ ವಿಚಾರದಲ್ಲಿ ಜನಾರ್ದನ ರೆಡ್ಡಿ ಮತ್ತು ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ..ಜಗದೀಶ್ ಶೆಟ್ಟರ್ ಸಹ  ಬ್ಯಾಟ್ ಬೀಸಿದ್ದಾರೆ.  ಹಾಗಾದರೆ ಶೆಟ್ಟರ್ ಏನು ಹೇಳಿದ್ದಾರೆ.

ಬೆಂಗಳೂರು[ಡಿ.04]   ಹಂಪಿ ಉತ್ಸವವನ್ನು ರಾಜ್ಯ ಸರ್ಕಾರ ಕಡೆಗಣಿಸಡಿದ್ದಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಕೆಂಡಾಮಂಡಲವಾಗಿ ತಮ್ಮ ಫೇಸ್‌ಬುಕ್‌ನಲ್ಲಿ  ಬರೆದಿದ್ದು ಅಲ್ಲದೆ ಸರ್ಕಾರ ದಿವಾಳಿಯಾಗಿದ್ದರೆ ತಾನೇ ಹಣ ಕೊಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಹ ತಿರುಗೇಟು ನೀಡಿದ್ದರು.

ಆದರೆ ಇದೀಗ ಮಾಜಿ ಸಿಎಂ, ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅಖಾಡಕ್ಕೆ ಇಳಿದಂತೆ ಕಾಣುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಶೆಟ್ಟರ್ ಹಂಪಿ ಉತ್ಸವದ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡುತ್ತಾ ಪರೋಕ್ಷವಾಗಿ ರಾಝ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದಿವಾಳಿಯಾಗಿದ್ದರೆ ನಾನು ದುಡ್ಡು ಕೊಡ್ತೆನೆ..ಹಂಪಿ ಉತ್ಸವಕ್ಕೆ ರೆಡ್ಡಿ ಪಟ್ಟು

ಹಂಪಿ ಉತ್ಸವ ರದ್ದಾಗುವಂತದ್ದು ಏನಾಗಿದೆ. ಟಿಪ್ಪು ಜಯಂತಿ ಮಾಡಲು ಹಣವಿದೆ. ಹಂಪಿ ಉತ್ಸವಕ್ಕೆ ಯಾಕೆ ಹಣವಿಲ್ಲ? ಎಂದು ಶೆಟ್ಟರ್ ಪ್ರಶ್ನೆ ಮಾಡಿದ್ದಾರೆ. ಈ ರೀತಿ ಉತ್ತರ ಕರ್ನಾಟಕವನ್ನು ತಾತ್ಸಾರಕ್ಕೆ ದೂಡಿರುವುದರಿಂದಲೆ ಕೆಲವೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ ಎಂದು ಶೆಟ್ಟರ್ ಹೇಳಿದ್ದಾರೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ನಮಗೆ ಏನೂ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು