
ಬೆಂಗಳೂರು(ಜೂ. 05) ನರೇಂದ್ರ ಮೋದಿ ಜೀವತಾವಧಿಯವರೆಗೂ ಪ್ರಧಾನಿ ಆಗಿಯೇ ಇರುತ್ತಾರೆ. ರಾಜ್ಯದಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಎಲ್ಲ ಎಂಪಿಗಳು ಅವರು ಮಾಡಿದ ಪುಣ್ಯವೋ, ಅವರ ಅಪ್ಪ- ಅಮ್ಮ ಮಾಡಿದ ಪುಣ್ಯವೋ ಬಿಜೆಪಿ ಕ್ಯಾಂಡಿಡೇಟ್ ಗಳಾಗಿ ಗೆದ್ದು ಬಂದರು. ರಾಜ್ಯದಲ್ಲಿ ಈ ಸರ್ಕಾರ ಇವತ್ತು ಇರುತ್ತೋ ಹೋಗುತ್ತೋ ಗೊತ್ತಿಲ್ಲ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಹೇಳಿದರು.
ಜಮೀರ್ ಗೆ ಹೊಸ ಹೆಸರು ನಾಮಕರಣ ಮಾಡಿದ ಈಶ್ವರಪ್ಪ
ಯಾವಾಗ ಬೇಕಾದರೂ ವಿಧಾನಸಭೆ ಚುನಾವಣೆ ಬರಬಹುದು. ಯಾವಾಗಲೇ ವಿಧಾನಸಭೆ ಚುನಾವಣೆ ಎದುರಾದರೂ, ಬಿಜೆಪಿ ಗೆದ್ದು,ವಿಶೇಷ ಸಂಸ್ಕೃತಿ ಉಳಿಸುವ ಸರ್ಕಾರ ರಚನೆ ಮಾಡುವುದು ನಿಶ್ಚಿತ. ನಾವು ಯಾರು ನಿರೀಕ್ಷೆ ಮಾಡದ ಗೆಲುವು ನೀಡಿದ ಮತದಾರರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.