‘ಸರ್ಕಾರಕ್ಕೆ ನೆರವಾಗುತ್ತಿದ್ದಾರೆ ಸ್ಪೀಕರ್’

Published : Jul 14, 2019, 11:11 AM IST
‘ಸರ್ಕಾರಕ್ಕೆ ನೆರವಾಗುತ್ತಿದ್ದಾರೆ ಸ್ಪೀಕರ್’

ಸಾರಾಂಶ

ಸ್ಪೀಕರ್ ಸರ್ಕಾರಕ್ಕೆ ನೆರವು ನೀಡುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. 

ಶಿವಮೊಗ್ಗ [ಜು.14: ಸ್ಪೀಕರ್‌ ರಮೇಶ್‌ ಕುಮಾರ್‌ ಆಡಳಿತ ಪಕ್ಷದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಪೀಕರ್‌ ಮೂಲಕ ಸಮಯ ಪಡೆದುಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ದೂರಿದ್ದಾರೆ. 

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‌ಕುಮಾರ್‌ ಸುಪ್ರೀಂ ಕೋರ್ಟ್‌ ನೀಡಿದ ಆದೇಶವನ್ನು ತಮಗೆ ಬೇಕಾದಂತೆ ತಿರುಚುತ್ತಾರೆ. ಕಾನೂನನ್ನು ಹೇಗೆ ದುರುಪಯೋಗ ಪಡಿಸಿಕೊಳ್ಳಬಹುದು ಎಂಬ ಜ್ಞಾನವಿದೆ. ಬಹಳ ಬುದ್ಧಿವಂತರು. ಸರ್ಕಾರಕ್ಕೆ ನೆರವಾಗುತ್ತಿದ್ದಾರೆ ಎಂದು ಹರಿಹಾಯ್ದರು. 

ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅವರು ಸಮಯ ನೀಡಿದ್ದರಿಂದ ಕಾಂಗ್ರೆಸ್‌ ಇಬ್ಬರು ಶಾಸಕರ ಮನವೊಲಿಕೆ ಕಾರ್ಯ ಮಾಡುತ್ತಿದೆ. ಏನೇ ಕುತಂತ್ರ ಮಾಡಿದರೂ ಈ ಸರ್ಕಾರ ಉಳಿಯಲ್ಲ. ಇದರಲ್ಲಿ ನಾವೇನು ಪ್ರಯತ್ನ ಪಡಬೇಕಾಗಿಲ್ಲ. ಅವರವರೇ ಬಂದು ರಾಜೀನಾಮೆ ನೀಡುತ್ತಿದ್ದಾರೆ. ನಮ್ಮ ಶಾಸಕರನ್ನು ಸೆಳೆಯುವ ಯತ್ನ ಮಾಡಬಹುದು. ಹೀಗಾಗಿ ನಮ್ಮ ಶಾಸಕರೆಲ್ಲ ರೆಸಾರ್ಟ್‌ನಲ್ಲಿ ಒಟ್ಟಾಗಿ ಇದ್ದಾರೆ. ನಮ್ಮ ಯಾವ ಶಾಸಕರೂ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!
ಹೊಸ ವರ್ಷ 2026ಕ್ಕೆ ಕೆಲವೇ ದಿನ, 2025ರಲ್ಲಿ ದೇಶಮಟ್ಟದಲ್ಲಿ ಸುದ್ದಿಯಾದ ಬೆಂಗಳೂರಿನ ಅಪರಾಧ ಲೋಕದ ಕರಾಳ ಅಧ್ಯಾಯಗಳಿವು!