ಎಂ.ಬಿ ಪಾಟೀಲ್ ಬಿಜೆಪಿ ನಾಯಕರ ಭೇಟಿ ಮೂಡಿಸಿದೆ ಕುತೂಹಲ

Published : Jun 11, 2018, 07:48 AM ISTUpdated : Jun 11, 2018, 07:50 AM IST
ಎಂ.ಬಿ ಪಾಟೀಲ್ ಬಿಜೆಪಿ ನಾಯಕರ ಭೇಟಿ ಮೂಡಿಸಿದೆ ಕುತೂಹಲ

ಸಾರಾಂಶ

ಸಚಿವ ಸ್ಥಾನ ವಂಚಿತ ಎಂ. ಬಿ. ಪಾಟೀಲ್ ಅವರನ್ನು ಬಿಜೆಪಿಯ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. 

ಬೆಂಗಳೂರು :  ಸಚಿವ ಸ್ಥಾನ ವಂಚಿತ ಎಂ. ಬಿ. ಪಾಟೀಲ್ ಅವರನ್ನು ಬಿಜೆಪಿಯ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿ ಸಿದೆ. ಭಾನುವಾರ ಮಧ್ಯಾಹ್ನ ಎಂ.ಬಿ. ಪಾಟೀಲ್ ಅವ ರನ್ನು ಭೇಟಿ ಮಾಡಿದ ಶಿವರಾಜ್ ಪಾಟೀಲ್ 5 ನಿಮಿಷಗಳ ಕಾಲ ಚರ್ಚೆ ಮಾಡಿದರು. ಬಂಡಾಯ ತಾರಕಕ್ಕೇರಿರುವ ಹಂತದಲ್ಲಿ ಶಿವರಾಜ್ ಪಾಟೀಲ್ ಭೇಟಿ ಕುತೂಹಲ ಹುಟ್ಟುಹಾಕಿದೆ. 

ಆದರೆ, ಭೇಟಿ ಬಳಿಕ ಮಾತನಾಡಿದ ಶಿವರಾಜ್ ಪಾಟೀಲ್, ನನ್ನ ಮತ್ತು ಪಾಟೀಲರ ಸಂಬಂಧ ಪಕ್ಷಗಳನ್ನು ಮೀರಿದ್ದು. ನಮ್ಮ ನಡುವೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಮಂತ್ರಿ ಆಗಿದ್ದಾಗ ನಮ್ಮ ಭಾಗದಲ್ಲಿ ಅನೇಕ ಕೆಲಸ ಮಾಡಿದ್ದಾರೆ.

ಹೀಗಾಗಿ ಇದೊಂದು ಕೃತಜ್ಞತಾ ಭೇಟಿ ಅಷ್ಟೇ ಹೊರತು ರಾಜಕೀಯ ಭೇಟಿಯಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಗೆ ಆಹ್ವಾನ ನೀಡಲು ಬಂದಿಲ್ಲವಾ ಎಂಬ ಪ್ರಶ್ನೆಗೆ, ಇಲ್ಲ. ಈಗಿನ ಕಾಂಗ್ರೆಸ್ ಗಲಾಟೆಗೂ ನನಗೂ ಯಾವುದೇ ಸಂಬಂಧವಿಲ್ಲ. ಯಾರ ಮನವೊಲಿಸಲೂ ಬಂದಿಲ್ಲ. ಅದಕ್ಕೆಲ್ಲ ಪಕ್ಷದಲ್ಲಿ ಹಿರಿಯರಿದ್ದಾರೆ ಎಂದಷ್ಟೇ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!