ಕೇಂದ್ರದ ರೈತ-ವಿರೋಧಿ ಧೋರಣೆ ಟೀಕಿಸಿದ ರೈತ ಮುಖಂಡನಿಗೆ ಕೆನ್ನೆಗೆ ಬಾರಿಸಿದ ಬಿಜೆಪಿ ನಾಯಕಿ!

Published : Mar 09, 2018, 03:54 PM ISTUpdated : Apr 11, 2018, 12:50 PM IST
ಕೇಂದ್ರದ ರೈತ-ವಿರೋಧಿ ಧೋರಣೆ ಟೀಕಿಸಿದ ರೈತ ಮುಖಂಡನಿಗೆ ಕೆನ್ನೆಗೆ ಬಾರಿಸಿದ ಬಿಜೆಪಿ ನಾಯಕಿ!

ಸಾರಾಂಶ

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಬಿಜೆಪಿ ನಾಯಕಿಯೊಬ್ಬಳು ರೈತ ಮುಖಂಡನಿಗೆ ಕೆನ್ನೆ ಬಾರಿಸಿರುವ ಘಟನೆ ಕುಲಾಂತರಿ ತಳಿಗಳ ಬಗ್ಗೆ ಕೇಂದ್ರದ ನೀತಿಯನ್ನು ಟೀಕಿಸಿ ಕರಪತ್ರ ವಿತರಿಸುತ್ತಿದ್ದ ರೈತ ಮುಖಂಡ 

ಚೆನ್ನೈ: ಬಿಜೆಪಿ ಮುಖಂಡನೊಬ್ಬ ಪೆರಿಯಾರ್ ಪ್ರತಿಮೆ ಧ್ವಂಸಗೊಳಿತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಘಟನೆ ಇನ್ನೂ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಬಿಜೆಪಿ ನಾಯಕಿಯೊಬ್ಬಳು ರೈತ ಮುಖಂಡನಿಗೆ ಕೆನ್ನೆ ಬಾರಿಸಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ.

ಕುಲಾಂತರಿ ತಳಿಗಳ ಬಗ್ಗೆ ಕೇಂದ್ರದ ನೀತಿಯನ್ನು ಟೀಕಿಸಿ ಅಯ್ಯಕಾನು ಎಂಬ ರೈತ ಮುಖಂಡ ತಿರುಚೆಂಡೂರ್ ದೇವಸ್ಥಾನದ ಬಳಿ  ಕರಪತ್ರಗಳನ್ನು ವಿತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಜಿಲ್ಲೆಯ ಬಿಜೆಪಿ ಮುಖಂಡೆ ನೆಲ್ಲಾಯಮ್ಮಲ್ ರೈತಮುಖಂಡರೊಂದಿಗೆ ವಾಗ್ವಾದಕ್ಕಿಳಿದಿದ್ದಾಳೆ.

ಆ ನಡುವೆ ರೈತ ಮುಖಂಡನನ್ನು ನಿಂದಿಸಿದ್ದಾಳೆ. ಪ್ರತಿಯಾಗಿ ರೈತ ಮುಖಂಡನೂ ಕೂಡ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾನೆ.

ಇಡೀಯ ಘಟನೆ ಕ್ಯಾಮೆರದಲ್ಲಿ ದಾಖಲಾಗಿದ್ದು, ಬಿಜೆಪಿ ನಾಯಕಿ ಕೈಯಲ್ಲಿ ಚಪ್ಪಲಿ ಹಿಡಿದು, ರೈತ ಮುಖಂಡನಿಗೆ ಬೆದರಿಕೆ ಹಾಕಿರುವುದು ಸೆರೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ