
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬಿಜೆಪಿ ಉಸ್ತುವಾರಿಗೆ ಮಾಜಿ ಸಚಿವ ವಿ. ಸೋಮಣ್ಣ ಬುಧವಾರ ರಾಜಿನಾಮೆ ನೀಡಿದ್ದಾರೆ.
ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಪ್ಪ ಅವರ ವರ್ತನೆಯಿಂದ ಬೇಸತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಮಲ್ಲಿಕಾರ್ಜುನಪ್ಪ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದಂದಿನಿಂದ ಪಕ್ಷವನ್ನು ಗೊಂದಲದ ಗೂಡಾಗಿ ಮಾಡಿದ್ದಾರೆ. ಇವರು ಮಾಡುವ ಅಪಪ್ರಚಾರಗಳಿಗೆ ನನ್ನನ್ನು ಹೊಣೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಮುಜುಗರ ಆಗಬಾರದು ಹಾಗೂ ತಮ್ಮ ವರ್ಚಸ್ಸಿಗೆ ಧಕ್ಕೆ ಆಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಎರಡು ಪುಟಗಳ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಜತೆಗೆ, ಹಾಸನ ಜಿಲ್ಲಾ ಉಸ್ತುವಾರಿಯಾಗಿ ಪಕ್ಷ ಸಂಘಟನೆಯಲ್ಲಿ ಮುಂದುವರಿಯುವುದಾಗಿ ಸೋಮಣ್ಣ ತಿಳಿಸಿದ್ದಾರೆ. ಈ ಮುಂಚೆ ಸೋಮಣ್ಣ ಅವರು ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವರು ಎಂದು ಹೇಳಲಾಗಿತ್ತು. ಆದರೆ ಸೋಮಣ್ಣ ಅವರ ಆಸೆಗೆ ಪರಿಮಳಾ ನಾಗಪ್ಪ ಅಡ್ಡಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.