ಹಜ್‌ಗೆ ತೆರಳುತ್ತಿದ್ದ ಮಗಳು ಮತ್ತು ಮೊಮ್ಮಗಳನ್ನು ಸುಬ್ರಮಣಿಯನ್‌ ಸ್ವಾಮಿ ಭೇಟಿ?

Published : Jul 07, 2018, 11:51 AM ISTUpdated : Jul 07, 2018, 12:29 PM IST
ಹಜ್‌ಗೆ ತೆರಳುತ್ತಿದ್ದ ಮಗಳು ಮತ್ತು ಮೊಮ್ಮಗಳನ್ನು ಸುಬ್ರಮಣಿಯನ್‌ ಸ್ವಾಮಿ ಭೇಟಿ?

ಸಾರಾಂಶ

ಹಜ್‌ ಯಾತ್ರೆಗೆ ತೆರಳಿದ್ದ ತಮ್ಮ ಸ್ವಂತ ಮಗಳು ಮತ್ತು ಮೊಮ್ಮಗಳನ್ನು ಹೈದರಾಬಾದ್‌ ವಿಮಾನನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ ಎಂಬ ಸಂದೇಶದೊಂದಿಗೆ, ಸುಬ್ರಮಣಿಯನ್‌ ಸ್ವಾಮಿ ಮುಸ್ಲಿಂ ಮಹಿಳೆಯರೊಂದಿಗೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಲಾಗಿದೆ. ಇದರ ಸತ್ಯಾಸತ್ಯತೆ ಏನು?

ಕಟ್ಟಾಹಿಂದು ನಾಯಕರೆಂದೇ ಗುರುತಿಸಿಕೊಂಡಿರುವ ರಾಜ್ಯಸಭಾ ಸದಸ್ಯರಾದ ಸುಬ್ರಮಣಿಯನ್‌ ಸ್ವಾಮಿ ಈಗ ಹಜ್‌ ಯಾತ್ರೆಗೆ ತೆರಳಿದ್ದ ತಮ್ಮ ಸ್ವಂತ ಮಗಳು ಮತ್ತು ಮೊಮ್ಮಗಳನ್ನು ಹೈದರಾಬಾದ್‌ ವಿಮಾನನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ ಎಂಬ ಸಂದೇಶದೊಂದಿಗೆ, ಸುಬ್ರಮಣಿಯನ್‌ ಸ್ವಾಮಿ ಮುಸ್ಲಿಂ ಮಹಿಳೆಯರೊಂದಿಗೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಲಾಗಿದೆ. ಫೇಸ್‌ಬುಕ್‌ನಲ್ಲಿ ಈ ಪೋಸ್ಟ್‌ ಇದೇ ಜೂನ್‌ 25ರಂದು ‘ಚಂದನ್‌ ಪ್ರತಿಹಸ್‌್ತ’ ಎಂಬುವರ ಖಾತೆಯಿಂದ ಮೊದಲಬಾರಿಗೆ ಅಪ್‌ಲೋಡ್‌ ಆಗಿದ್ದು, 1900 ಬಾರಿ ಶೇರ್‌ ಮಾಡಲಾಗಿದೆ. ಫೋಟೋದಲ್ಲಿರುವವರನ್ನು ಸುಬ್ರಮಣಿಯನ್‌ ಸ್ವಾಮಿ ಮಗಳು ಮತ್ತು ಮೊಮ್ಮಗಳು ಎಂದು ಹೇಳಲಾಗಿದೆ.

ಆದರೆ ನಿಜಕ್ಕೂ ಹಜ್‌ಗೆ ಹೋಗುವ ಮಗಳು ಮತ್ತು ಮೊಮ್ಮಗಳನ್ನು ಸುಬ್ರಮಣಿಯನ್‌ ಸ್ವಾಮಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದರೇ ಎಂದು ಹುಡುಕ ಹೊರಟಾಗ ಈ ಫೋಟೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂಬುದು ಪತ್ತೆಯಾಗಿದೆ.

ಮೇ.4ರಂದು ಜಗದೀಶ್‌ ಶೆಟ್ಟಿಎಂಬುವವರು ಇದೇ ಫೋಟೋವನ್ನು ಟ್ವೀಟ್‌ ಮಾಡಿ, ‘ಇದು ಬೆಂಗಳೂರು ವಿಮಾನ ನಿಲ್ದಾಣ. ಮುಸ್ಲಿಂ ಮಹಿಳೆಯರು ಸುಬ್ರಮಣಿಯನ್‌ ಸ್ವಾಮಿಯನ್ನು ಅಭಿನಂದಿಸಿ, ಅವರೊಂದಿಗೆ ಫೋಟೋ ಬಯಸಿದ್ದರು.’ ಎಂದು ಹೇಳಿದ್ದರು. ‘ಆಲ್ಟ್‌ನ್ಯೂಸ್‌’ ಶೆಟ್ಟಿಅವರನ್ನೇ ಸಂಪರ್ಕಿಸಿ, ಸ್ಪಷ್ಟೀಕರಣ ಕೇಳಿದ್ದು,‘ ಫೋಟೋದಲ್ಲಿರುವ ಮುಸ್ಲಿಂ ಮಹಿಳೆಯರು ಸುಬ್ರಮಣಿಯನ್‌ ಸ್ವಾಮಿಯೊಂದಿಗೆ ಫೋಟೋ ತೆಗೆದುಕೊಳ್ಳಲು ಬಯಸಿದ್ದರು. ನಾನೇ ಫೋಟೋವನ್ನು ಕ್ಲಿಕ್ಕಿಸಿದ್ದೆ. ಫೋಟೋದಲ್ಲಿರುವವರು ಸುಬ್ರಮಣಿಯನ್‌ ಸ್ವಾಮಿ ಅವರ ಮಗಳು, ಮೊಮ್ಮಗಳಲ್ಲ’ ಎಂದಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ವಿಷಯವಾಗಿ ‘ಟೈಮ್ಸ್‌ ನೌ’ ಚರ್ಚೆಯಲ್ಲಿ ಭಾಗವಹಿಸಲು ಸುಬ್ರಮಣಿಯನ್‌ ಸ್ವಾಮಿ ಮೇ.4ರಂದು ಬೆಂಗಳೂರಿಗೆ ಬಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!