
ತುಮಕೂರು(ಆ.25] ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ-ಮಾಜಿ ಎಮ್ ಎಲ್ ಎ ಗಳ ನಡುವೆ ಟಾಕ್ ಫೈಟ್ ಆರಂಭವಾಗಿದೆ. ಗ್ರಾಮಾಂತರ ಜೆಡಿಎಸ್ ಶಾಸಕ ಸಿ.ಗೌರಿಶಂಕರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಶಾಸಕ ಸುರೇಶ್ ಗೌಡ ದೂರಿನ ಸರಮಾಲೆಯನ್ನೇ ಇಟ್ಟಿದ್ದಾರೆ.
ಶಾಸಕ ಗೌರಿಶಂಕರ್ ಅಧಿಕಾರಿಗಳ ವರ್ಗಾವಣೆ ಹಾಗೂ ಕಾಮಗಾರಿಗಳ ಕಮಿಷನ್ ದಂಧೆಯಿಂದ ಕೇವಲ ಮೂರೇ ತಿಂಗಳಲ್ಲಿ 8 ಕೋಟಿ ಪಡೆದಿದ್ದಾರೆ. ಶಾಸಕರ ಆಪ್ತ ನರೇಂದ್ರನಹಳ್ಳಿ ವಿಜಯಕುಮಾರ್ ಡೈರಿಯಲ್ಲಿ ಹಣ ಪಡೆದ ಉಲ್ಲೇಖವಿದೆ. ಇಲ್ಲೆವರೆಗೂ 8 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು ಎಂಟ್ರಿಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಡೈರಿ ರಹಸ್ಯ ಬಿಚ್ಚಿಡಿಲು ಸಿಬಿಐ ಗೆ ಮನವಿ ಮಾಡುತ್ತೇನೆ. ಪಿಎಸ್ ಐ ವರ್ಗಾವಣೆಗೆ 15 ಲಕ್ಷ ರೂ, ಸಿಪಿಐ ಗೆ 20 ಲಕ್ಷ ರೂ ಫಿಕ್ಸ್ ಆಗಿದೆ. ಗ್ರಾಮ ಪಂಚಾಯತಿ, ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯಲ್ಲೂ ವರ್ಗಾವಣೆ ಗಾಗಿ ಹಣ ಪಡೆಯುತಿದ್ದಾರೆ. ಕೇವಲ ಮೂರೇ ತಿಂಗಳಲ್ಲಿ ಬೃಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.