ಕೋರ್ಟ್ ಸಮಯ ಹಾಳು ಮಾಡಿದ್ದಕ್ಕೆ ಬಿಜೆಪಿ ನಾಯಕಿಗೆ ದಂಡ!

Published : Dec 04, 2018, 06:02 PM IST
ಕೋರ್ಟ್ ಸಮಯ ಹಾಳು ಮಾಡಿದ್ದಕ್ಕೆ ಬಿಜೆಪಿ ನಾಯಕಿಗೆ ದಂಡ!

ಸಾರಾಂಶ

ಶಬರಿಮಲೆ ವಿವಾದದಲ್ಲಿ ಕೇರಳ ಬಿಜೆಪಿ ಘಟಕಕ್ಕೆ ಭಾರೀ ಹಿನ್ನೆಡೆ! ಕೇರಳ ಹೈಕೋರ್ಟ್ ನಿಂದ ಬಿಜೆಪಿ ನಾಯಕಿಗೆ 25 ಸಾವಿರ ರೂ. ದಂಡ! ಕೇರಳ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್!  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಸಮಯಕ್ಕೆ ಬಾರದ ನಾಯಕಿ! ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ ಆರೋಪದ ಮೇಲೆ ದಂಡ! ಶೋಭಾ ಸುರೇಂದ್ರನ್ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್  

ತಿರುವನಂತಪುರಂ(ಡಿ.04): ಶಬರಿಮಲೆ ವಿವಾದ ಕುರಿತಂತೆ ಕೇರಳ ಬಿಜೆಪಿ ಘಟಕಕ್ಕೆ ಕೇರಳ ಹೈಕೋರ್ಟ್ ನಲ್ಲಿ ಬಹುದೊಡ್ಡ ಹಿನ್ನಡೆಯಾಗಿದೆ. 

ಶಬರಿಮಲೆಯಲ್ಲಿ ಪೊಲೀಸ್ ಆ್ಯಕ್ಷನ್ ವಿರೋಧಿಸಿ ಬಿಜೆಪಿ ನಾಯಕಿಯೊಬ್ಬರು ಕೇರಳ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

ಆದರೆ ಅರ್ಜಿಯ ವಿಚಾರಣೆ ವೇಳೆ ಸರಿಯಾದ ಸಮಯಕ್ಕೆ ಬಾರದ ಕಾರಣಕ್ಕೆ ಅರ್ಜಿಯನ್ನು ವಜಾಗೊಳಿಸಿದ್ದಲ್ಲದೇ  ಆ ನಾಯಕಿಗೆ 25 ಸಾವಿರ ರೂ. ದಂಡ ಕೂಡ ವಿಧಿಸಲಾಗಿದೆ.

ಶಬರಿಮೆಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಅಯ್ಯಪ್ಪ ಭಕ್ತರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಮತ್ತು ಭಕ್ತರ ನಡುವೆ ಭಾರೀ ಜಟಾಪಟಿ ನಡೆದಿತ್ತು.

ಆದರೆ ಅಯ್ಯಪ್ಪ ಭಕ್ತರ ಮೇಲೆ ಪೊಲೀಸ್ ದಾಳಿ ವಿರೋಧಿಸಿ ಕೇರಳ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಆದರೆ ಅರ್ಜಿಯ ವಿಚಾರಣೆಗೆ ಶೋಭಾ ಸುರೇಂದ್ರನ್ ಸಮಯಕ್ಕೆ ಸರಿಯಾಗಿ ಹಾಜರಾಗಲಿಲ್ಲ. ಇದರಿಂದ ಕುಪಿತಗೊಂಡ ನ್ಯಾಯಾಧೀಶರು, ಶೋಭಾ ಅರ್ಜಿ ತಿರಸ್ಕರಿಸಿದ್ದಲ್ಲದೇ ಆಧಾರರಹಿತ ಆರೋಪ ಮಾಡಿದ್ದಕ್ಕಾಗಿ 25 ಸಾವಿರ ರೂ. ದಂಡ ಕೂಡ ವಿಧಿಸಿದೆ.

ಬಳಿಕ ಕೋರ್ಟ್ ಸಮಯ ವ್ಯರ್ಥ ಮಾಡಿದ್ದಕ್ಕೆ ಶೋಭಾ ನ್ಯಾಯಾಲಯದ ಕ್ಷಮೆ ಕೋರಿದ್ದಾರೆ. ಅಲ್ಲದೇ 25 ಸಾವಿರ ರೂ. ದಂಡವನ್ನು ಪಾವತಿಸುವುದಾಗಿ ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ