ದೀದಿಗೆ 10 ಲಕ್ಷ ಜೈ ಶ್ರೀರಾಮ್ ಅಂಚೆ ಕಾರ್ಡ್ ರವಾನಿಸಲು ನಿರ್ಧಾರ!

Published : Jun 01, 2019, 08:56 PM IST
ದೀದಿಗೆ 10 ಲಕ್ಷ ಜೈ ಶ್ರೀರಾಮ್ ಅಂಚೆ ಕಾರ್ಡ್ ರವಾನಿಸಲು ನಿರ್ಧಾರ!

ಸಾರಾಂಶ

ಪ.ಬಂಗಾಳದಲ್ಲಿ ತಾರಕಕ್ಕೇರಿದ ಜೈ ಶ್ರೀರಾಮ್ ಘೋಷಣೆ| ಜೈ ಶ್ರೀರಾಮ್ ಘೋಷಣೆ ಕೂಗಿದವರಿಗೆ ಲಾಠಿ ಏಟು| ಮಮತಾ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ| ದೀದಿಗೆ 10 ಲಕ್ಷ ಜೈ ಶ್ರೀರಾಮ್ ಅಂಚೆ ಕಾರ್ಡ್ ರವಾನಿಸಲು ನಿರ್ಧಾರ| ಅಂಚೆ ಕಾರ್ಡ್ ರವಾನಿಸಲು ಬಿಜೆಪಿ ಶಾಸಕ ಅರ್ಜುನ್ ಸಿಂಗ್ ನಿರ್ಧಾರ|  

ಕೊಲ್ಕತ್ತಾ(ಜೂ.01): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ  ಅಂಚೆ ಕಾರ್ಡ್ ಗಳನ್ನು ರವಾನಿಸಲು ಬಿಜೆಪಿ ಶಾಸಕ ಅರ್ಜುನ್ ಸಿಂಗ್ ನಿರ್ಧರಿಸಿದ್ದಾರೆ.

ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡ್ ಗಳನ್ನು ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ರವಾನಿಸುವುದಾಗಿ ಅರ್ಜುನ್ ಸಿಂಗ್ ಹೇಳಿದ್ದಾರೆ.

ಟಿಎಂಸಿ ಸಭೆ ಹೊರಗಡೆ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ, ಜೈ ಶ್ರೀ ರಾಮ್ ಎಂದು ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಲಾಠಿ ಚಾರ್ಚ್ ನಡೆಸಿದ ನಂತರ ಅರ್ಜುನ್ ಸಿಂಗ್ ಈ ನಿರ್ಧಾರ ಕೈಗೊಂಡಿದ್ದಾರೆ.

ಮಾಜಿ ತೃಣಮೂಲ ಕಾಂಗ್ರೆಸ್ ಶಾಸಕರಾಗಿರುವ ಅರ್ಜುನ್ ಸಿಂಗ್,  ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ
ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!