
ತುಮಕೂರು(ಅ.31): ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ವಿದ್ಯಾರ್ಥಿ ಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತಾಲೂಕಿನ ನಾಗವಲ್ಲಿಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ತಮ್ಮ ಐದು ವರ್ಷಗಳ ಸಾಧನೆ ಕರಪತ್ರವನ್ನು ಪ್ರತಿ ಮನೆಮನೆಗೆ ಪೋಸ್ಟ್ ಮಾಡಿಸುತ್ತಿದ್ದಾರೆ. ಶಾಲಾ ಶಿಕ್ಷಕರು ಕೂಡಾ ಇದಕ್ಕೆ ಸಾಥ್ ನೀಡುತಿದ್ದಾರೆ. ಅಲ್ಲದೆ ಮುಂದಿನ ಬಾರಿ ತಮಗೇ ಮತ ಹಾಕುವಂತೆ ವಿದ್ಯಾರ್ಥಿಗಳ ಮೂಲಕ ಪೋಷಕರಿಗೆ ಒತ್ತಡ ಹಾಕುತಿದ್ದಾರೆ ಎಂದು ಆರೋಪಿಸಲಾಗಿದೆ. ಕರಪತ್ರ ಹಂಚುತ್ತಿರುವುದು ಇದೀಗ ಬಹಿರಂಗವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.