
ಚಿತ್ರದುರ್ಗ (ಸೆ.18): ಬಿಜೆಪಿ ಮುಖಂಡ ಈಶ್ವರಪ್ಪ ಹುಟ್ಟುಹಾಕಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಪಕ್ಷದೊಳಗಿರುವ ಅಸಮಾಧಾನ ಬಹಿರಂಗವಾಗತೊಡಗಿದೆ.
ರಾಯಣ್ಣ ಬ್ರಿಗೇಡ್ ಜೊತೆ ಗುರುತಿಸಿಕೊಂಡರೆ ಅಥವಾ ಕಾರ್ಕ್ರಮಗಳಲ್ಲಿ ಭಾಗವಹಿಸಿದರೆ ಅಂತಹ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ರಾಯಣ್ಣ ಬ್ರಿಗೇಡ್’ಗೆ ಸೇರಿದರೆ ಅಥವಾ ಅದರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರೆ ಅಂಥವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.
ಈಶ್ವರಪ್ಪನವರು ಸ್ವಂತ ರಾಜಕೀಯ ಲಾಭಕ್ಕಾಗಿ ರಾಯಣ್ಣ ಹೆಸರು ಬಳಸಿಕೊಂಡು ಕಾರ್ಯಕರ್ತ ರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಪುಟ್ಟಸ್ವಾಮಿ ಹೇಳಿದ್ದಾರೆ.
ಪಕ್ಷದಲ್ಲಿ ಉನ್ನತ ಸ್ಥಾನ ಹೊಂದಿದ್ದರೂ ಜವಾಬ್ದಾರಿ ಮರೆತು ಯಡಿಯೂರಪ್ಪ ರಾಯಣ್ಣ ಬ್ರಿಗೇಡ್ ಉದ್ಘಾಟಿಸುತ್ತಾರೆ ಎಂದು ಹೇಳುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲವೆಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.