ಯೋಧರ ಜತೆ ದೀಪಾವಳಿ ಆಚರಿಸಿದ ಬಿಜೆಪಿ ನಾಯಕರು

Published : Oct 30, 2016, 07:10 AM ISTUpdated : Apr 11, 2018, 12:44 PM IST
ಯೋಧರ ಜತೆ ದೀಪಾವಳಿ ಆಚರಿಸಿದ ಬಿಜೆಪಿ ನಾಯಕರು

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ  ಅನಂತಕುಮಾರ್ ಹಾಗೂ ಸದಾನಂದಗೌಡ, ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಆಚರಣೆಯಲ್ಲಿ ಭಾಗಿಯಾಗಿದ್ದರು.

ಬೆಂಗಳೂರು (ಅ.30): ಈ ಬಾರಿಯ ದೀಪಾವಳಿಯನ್ನು ಬಿಜೆಪಿ ನಾಯಕರು ಯಲಹಂಕದ ಬಿಎಸ್ಎಫ್ ತರಬೇತಿ ಶಾಲೆಯಲ್ಲಿ ಆಚರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ  ಅನಂತಕುಮಾರ್ ಹಾಗೂ ಸದಾನಂದಗೌಡ, ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಆಚರಣೆಯಲ್ಲಿ ಭಾಗಿಯಾಗಿದ್ದರು.

ಬಿಜೆಪಿ ನಾಯಕರು ಬಿಎಸ್ಎಫ್ ತರಬೇತಿ ಶಾಲೆಗೆ ತೆರಳಿ ಸೈನಿಕರಿಗೆ ಸಿಹಿ ಹಂಚಿ ಶುಭಾಶಯ ತಿಳಿಸಿದರು.

ಸೇನೆಯೊಂದಿಗೆ ನಾಗರಿಕರು ಸೇರಿ ದೀಪಾವಳಿ ಆಚರಿಸಬೇಕು; ಅವರ ಸಮಸ್ಯೆ ಕೇಳಬೇಕು; ಅವರ ನಿರಂತರ ಸಂಪರ್ಕದಲ್ಲಿರಬೇಕು; ಸೈನಿಕರು ಸ್ಥೈರ್ಯ ಕಳೆದುಕೊಂಡರೆ, ಯುದ್ಧ ಗೆಲ್ಲೋದು ಕಷ್ಟ, ಅದಕ್ಕೆ ಸೈನಿಕರ ಕುಟುಂಬವನ್ನು ನಾಗರಿಕರು ನೋಡಿಕೊಳ್ಳಬೇಕು ಹಾಗೂ ಪ್ರತಿಯೊಂದು ಕುಟುಂಬದಿಂದ ಒಬ್ಬನಾದರೂ ಸೈನಿಕನಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಈ ಬಾರಿ ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!