
ಬೆಂಗಳೂರು: ಚೀನಾ ವಿರುದ್ಧದ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ ಚೀನಾದಲ್ಲಿ ಉತ್ಪಾದಿಸಿರುವ ವಸ್ತುಗಳನ್ನು ಖರೀದಿಸದಂತೆ ನಡೆಯುತ್ತಿರುವ ಅಭಿಯಾನಕ್ಕೆ ಬಿಜೆಪಿಯೂ ಸಾಥ್ ನೀಡಲು ತೀರ್ಮಾನಿಸಿದೆ. ಭಾನುವಾರ ನಡೆದ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ವೇಳೆಯೂ ಈ ಬಗ್ಗೆ ಚರ್ಚೆ ನಡೆದಿದ್ದು, ಸ್ವದೇಶಿ ಜಾಗರಣ್ ಮಂಚ್ ಹಮ್ಮಿಕೊಂಡಿರುವ 'ಸ್ವದೇಶಿ ಸುರಕ್ಷಾ ಅಭಿಯಾನ'ಕ್ಕೆ ಕೈಜೋಡಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಪ್ರಕಾರ ಇನ್ನು ಮುಂದೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಚೀನಾದಲ್ಲಿ ಉತ್ಪಾದಿಸಿರುವ ವಸ್ತುಗಳ ಖರೀದಿ ಸ್ಥಗಿತಗೊಳಿಸಲಿದ್ದಾರೆ. ಬದಲಾಗಿ, ಬೇರೆಯವರೂ ಚೀನಾ ವಸ್ತುಗಳನ್ನು ಖರೀದಿಸದಂತೆ ಪ್ರಚಾರ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಅಲ್ಲದೇ, ಈ ತಿಂಗಳ 15ರವರೆಗೆ ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚು ಮೂಲಕ ಚೀನಾ ವಸ್ತುಗಳನ್ನು ಖರೀದಿಸದಂತೆ ತಿಳಿವಳಿಕೆ ನೀಡುವ ಹಾಗೂ ಪ್ರಚಾರ ಮಾಡುವ ಕೆಲಸ ಮಾಡಲಿದ್ದಾರೆ ಎಂದೂ ಹೇಳಿದರು.
ಚೀನಾ ಉತ್ಪಾದಿತ ವಸ್ತುಗಳನ್ನು ಖರೀದಿಸದಂತೆ ಸ್ವದೇಶಿ ಜಾಗರಣ್ ಮಂಚ್'ನ "ಸ್ವದೇಶಿ ಸುರಕ್ಷಾ ಅಭಿಯಾನ"ಕ್ಕೆ ಕೈಜೋಡಿಸಲು ಬಿಜೆಪಿ ತೀರ್ಮಾನಿಸಿದೆ.
- ಸಿ.ಟಿ.ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಕನ್ನಡಪ್ರಭ ವಾರ್ತೆ
epaperkannadaprabha.com
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.