
ಬೆಂಗಳೂರು [ಜು.25] : ರಾಜ್ಯದಲ್ಲಿ ದೋಸ್ತಿ ಸರ್ಕಾರ ಪತನದ ಬಳಿಕ ಸರ್ಕಾರ ರಚನೆ ಮಾಡಲು ಮುಂದಾಗಿದ್ದ ಬಿಜೆಪಿ ನಾಯಕರಿಗೆ ಸದ್ಯ ಹೈ ಕಮಾಂಡ್ ಬ್ರೇಕ್ ಹಾಕಿದೆ.
"
ಈಗಾಗಲೇ ನಮ್ಮ ನಾಯಕರು ದಿಲ್ಲಿಗೆ ಹೋಗಿ ಅಮಿತ್ ಶಾ ಭೇಟಿ ಮಾಡಿದ್ದಾರೆ. ಮತ್ತೆ ಭೇಟಿ ಮಾಡುವ ಭರವಸೆಯನ್ನೂ ನೀಡಿದ್ದಾರೆ. ಮತ್ತೆ ಯಾವ ಸಮಸ್ಯೆಯೂ ಸರ್ಕಾರಕ್ಕೆ ಎದುರಾಗದಿರಲಿ ಎಂದು ಈ ರೀತಿ ಯೋಚನೆ ಮಾಡಿ ಮುನ್ನಡೆಯುತ್ತಿದ್ದೇವೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.
ಇಂದು ಸಂಜೆ ವೇಳೆ ಶುಭ ಸುದ್ದಿ ಬರುತ್ತದೆ. ಕೇಂದ್ರದ ನಾಯಕರು ಎಚ್ಚರಿಕೆಯಿಂದ ಮುನ್ನಡೆಯಲು ಸೂಚನೆ ನೀಡಿದ್ದಾರೆ. ಕೇಂದ್ರದಿಂದ ಸೂಚನೆ ಬಂದಲ್ಲಿ ಶುಭ ಸಮಯವಾದ ಆಷಾಡದಲ್ಲಿ ರಾಜ್ಯ ನಾಯಕರು ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದು ವಿಶ್ವನಾಥ್ ಹೇಳಿದರು.
ಕರ್ನಾಟಕ ರಾಜಕೀಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇನ್ನು ಅತೃಪ್ತರಾಗಿ ಮುಂಬೈಗೆ ತೆರಳಿರುವ 15 ಜನರ ಬಗ್ಗೆಯೂ ನಾವು ಯೋಚಿಸಬೇಕಿದೆ. ಅವರ ರಾಜೀನಾಮೆ ಇನ್ನೂ ಕೂಡ ಅಂಗೀಕಾರವಾಗಿಲ್ಲ. ಅವರ ಭವಿಷ್ಯದ ಬಗ್ಗೆಯೂ ಕೂಡ ನಾವು ಯೋಚಿಸಬೇಕಿದೆ. ನಾಲ್ಕು ವರ್ಷಗಳ ಕಾಲ ಸುಭದ್ರವಾಗಿ ಆಡಳಿತ ನಡೆಸುವ ಸರ್ಕಾತ ನೀಡಬೇಕಾದ ಹಿನ್ನೆಲೆಯಲ್ಲಿ ಕೆಲವೊಂದು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಿದೆ ಎಂದು ಶಾಸಕ ವಿಶ್ವನಾಥ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.