ಸೋನಿಯಾ ಗಾಂಧಿ ಭೇಟಿ ಮಾಡಿದ ಪ್ರಹ್ಲಾದ್ ಜೋಷಿ: ಕಾರಣವೇನು?

Published : Jun 07, 2019, 04:57 PM IST
ಸೋನಿಯಾ ಗಾಂಧಿ ಭೇಟಿ ಮಾಡಿದ ಪ್ರಹ್ಲಾದ್ ಜೋಷಿ: ಕಾರಣವೇನು?

ಸಾರಾಂಶ

ಸೋನಿಯಾ ಗಾಂಧಿ ಭೇಟಿ ಮಾಡಿದ ಪ್ರಹ್ಲಾದ್ ಜೋಷಿ ನೇತೃತ್ವದ ಬಿಜೆಪಿ ನಿಯೋಗ| ಜೂ.17ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನ| ಸುಗಮ ಕಾರ್ಯಕಲಾಪಕ್ಕೆ ಸಹಕಾರ ಕೋರಿದ ಬಿಜೆಪಿ ಸಂಸದರು|  10 ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಭೇಟಿ ಮಾಡಿದ ಬಿಜೆಪಿ ನಿಯೋಗ| ಜೂ.16 ರಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದಿಂದ ಸರ್ವ ಪಕ್ಷಗಳ ಸಭೆ|

ನವದೆಹಲಿ(ಜೂ.07): ಜೂ.17ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನಕ್ಕೂ ಮುನ್ನ, ಸುಗಮ ಕಾರ್ಯಕಲಾಪಕ್ಕೆ ಸಹಕಾರ ಕೋರಲು ಬಿಜೆಪಿ ಸಂಸದರ ನಿಯೋಗ ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ನೇತೃತ್ವದ ನಿಯೋಗದಲ್ಲಿ, ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವ ಅರ್ಜುನ್ ರಾಮ್ ಮೇಘ್‌ವಾಲ್ ಇದ್ದರು.

ನವದೆಹಲಿಯಲ್ಲಿರುವ 10 ಜನಪಥ್ ನಿವಾಸದಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಸುಗಮ ಕಾರ್ಯಕಲಾಪಕ್ಕೆ ಪ್ರತಿಪಕ್ಷ ಕಾಂಗ್ರೆಸ್ ನ ಸಹಕಾರ ಕೋರಿದರು.

ಸೋನಿಯಾ ಗಾಂಧಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತೋಮರ್, ಸುಗಮ ಕಾರ್ಯಕಲಾಪ ಹಿನ್ನೆಲೆಯಲ್ಲಿ ಸಹಕಾರ ಕೋರಿ ಪ್ರತಿ ಪಕ್ಷಗಳ ಎಲ್ಲಾ ನಾಯಕರೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನು ಅಧಿವೇಶನಕ್ಕೂ ಮುನ್ನಾ ದಿನ ಅಂದರೆ ಜೂ.16 ರಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸರ್ವ ಪಕ್ಷಗಳ ಸಭೆ ನಡೆಸಲಿದ್ದು, ಮೊದಲ ಸಂಸತ್ ಅಧಿವೇಶನಕ್ಕೆ ಸಹಕಾರ ಕೋರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ