
ಬೆಂಗಳೂರು(ಸೆ.23): ಕಾವೇರಿ ಪರ ಧ್ವನಿಯೆತ್ತದ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ. ಸದಾನಂದ ಗೌಡ, ನಿರ್ಮಲ ಸೀತರಾಮನ್ ಹಾಗೂ ವೆಂಕಯ್ಯ ನಾಯ್ಡು ನಾಲಾಯಕರು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಾಗವಹಿಸದೇ ಇರುವುದು ಅವರ ಸೊಕ್ಕನ್ನು ತೋರಿಸುತ್ತದೆ ಎಂದು ವಾಟಾಳ್ ಕಿಡಿಕಾರಿದ್ದಾರೆ. ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಮಾಡುತ್ತಿರುವ ನಾಟಕವನ್ನು ಕರ್ನಾಟಕದ ಜನತೆ ಗಮನಿಸುತ್ತಿದ್ದಾರೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ನಾಯಕರುಗಳಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಮಾತನಾಡಿ, ರಾಜ್ಯ ಬಿಜೆಪಿ ನಾಯಕರು ರಾಜಕೀಯ ಮಾಡಬಾರದು, ಅವರು ಮೋದಿ ಕರ್ನಾಟಕದ ಪರವಾಗಿ ಮಾತನಾಡುವಂತೆ ಕೇಳಬಹುದಿತ್ತು ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.