
ಮೈಸೂರು [ಸೆ.20]: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಉತ್ತಮ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ್ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಸಂಪುಟ ಇದ್ದರೆ ಒಳ್ಳೆಯದು. ಈ ನಿಟ್ಟಿನಲ್ಲಿ ಹೀಗೆ ಹೇಳುತ್ತಿದ್ದೇನೆ ಎಂದರು.
17 ಅನರ್ಹ ಶಾಸಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ನಮ್ಮ ನಾಯಕರು ಸೂಕ್ತ ತೀರ್ಮಾನ ತೆಗೆದು ಕೊಳ್ಳುತ್ತಿದ್ದಾರೆ. ನಮ್ಮೆಲ್ಲಾ ಸ್ನೇಹಿತರು ನಮ್ಮ ಜೊತೆಗೆ ಇದ್ದಾರೆ. ಯಾರಿಗೂ ಅಸಮಾಧಾನವಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹೇಳಿದರು.
ರಾಜ್ಯದಲ್ಲಿ 17 ಮಂದಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದು ಬಳಿಕ ಅವರನ್ನು ಸ್ಪೀಕರ್ ಅನರ್ಹರನ್ನಾಗಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.