
ಹುಬ್ಬಳ್ಳಿ : ನಮ್ಮವರು ಅವರ ಜತೆಗಲ್ಲ ಬಿಜೆಪಿಯವರೇ ಕಾಂಗ್ರೆಸ್ ಜತೆಗೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಹೇಗಾದರೂ ಮಾಡಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಇಂಥ ಪ್ರಯತ್ನಕ್ಕೆ ಕೈ ಹಾಕಿ ಮೂರು ದಿನ ಮುಖ್ಯಮಂತ್ರಿಯಾಗಿದ್ದರು. ಮತ್ತೆ ಅಂತಹ ಯಾವ ಪ್ರಯತ್ನಗಳೂ ಫಲಕಾರಿ ಆಗುವುದಿಲ್ಲ. ಬಿಜೆಪಿ ಶಾಸಕರೇ ಕಾಂಗ್ರೆಸ್ನ ಸಂಪರ್ಕದಲ್ಲಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇನ್ನು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ಈ ದೇಶದ ಕಾನೂನಾಗಲಿ, ಸಂವಿಧಾನವಾಗಲಿ ಗೊತ್ತಿಲ್ಲ. ಅಂಥವರ ಮಾತಿಗೆ ನಾನು ಉತ್ತರಿಸುವ ಗೋಜಿಗೂ ಹೋಗುವುದಿಲ್ಲ ಎಂದು ಇದೇ ವೇಳೆ ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಂಬಿಕೆಯಿಲ್ಲ ಎನ್ನುವ ಚಾಮರಾಜನಗರದಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದರು.
ಹುಳಿ ಹಿಂಡುತ್ತಿರುವ ಬಿಜೆಪಿ: ಬಿಜೆಪಿಗರು ಬರೀ ಜಾತಿ ರಾಜಕಾರಣ ಮಾಡುತ್ತ ಸಮಾಜದಲ್ಲಿ ಜಾತಿ ಹೆಸರಿನಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಅವರ ಸಾಧನೆ ಶೂನ್ಯ. ನಾನೂ ಹಿಂದು. ನಾವು ಯಾರೂ ಇಂತಹದ್ದೇ ಜಾತಿ, ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟಿದವರಲ್ಲ. ನಾವೆಲ್ಲ ಮನುಷ್ಯರು. ಮೊದಲು ಮನುಷ್ಯ ಮನುಷ್ಯನನ್ನು ಪ್ರೀತಿಸುವುದನ್ನು ಕಲಿಯಬೇಕು ಎಂದರು.
ಜೆಡಿಎಸ್ ಜತೆ ಫ್ರೆಂಡ್ಲಿ ಫೈಟ್: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ ಇದ್ದು, ಜೆಡಿಎಸ್ ನಡುವೆ ಫ್ರೆಂಡ್ಲಿ ಫೈಟ್ ನಡೆಯಲಿದೆ. ಕಾಂಗ್ರೆಸ್ಗೆ ಬಿಜೆಪಿ ಪ್ರಮುಖ ರಾಜಕೀಯ ವೈರಿಯಾಗಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಬಿಜೆಪಿ ಸೋಲಿಸುವ ಸಂಕಲ್ಪ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.