ಹಠಾತ್ ಪಠ್ಯಕ್ರಮ ಬದಲಿಗೆ ಬಿಜೆಪಿ ವಿರೋಧ

Published : Jan 04, 2017, 03:19 PM ISTUpdated : Apr 11, 2018, 12:49 PM IST
ಹಠಾತ್ ಪಠ್ಯಕ್ರಮ ಬದಲಿಗೆ ಬಿಜೆಪಿ ವಿರೋಧ

ಸಾರಾಂಶ

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯ ಸರ್ಕಾರ ಪಠ್ಯಕ್ರಮ ಬದಲಾಯಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಶಾಸಕರ ನಿಯೋಗ ಬುಧವಾರ ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ದೂರು ನೀಡಿದೆ.

ಬೆಂಗಳೂರು (ಜ.04): ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯ ಸರ್ಕಾರ ಪಠ್ಯಕ್ರಮ ಬದಲಾಯಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಶಾಸಕರ ನಿಯೋಗ ಬುಧವಾರ ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ದೂರು ನೀಡಿದೆ.

ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರಗೌಡ, ಅರುಣ್ ಶಹಾಪುರ ಹಾಗೂ ಅನುರಾಧ ತಾರಾ ಅವರನ್ನೊಳಗೊಂಡ ನಿಯೋಗ ರಾಜ್ಯಪಾಲ ವಾಲಾ ಅವರನ್ನು ಭೇಟಿ ಮಾಡಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪರಿಷ್ಕರಣೆಗೆ ಒಳಪಡದೇ ರಾಜ್ಯ ಸರ್ಕಾರ ಪಠ್ಯಕ್ರಮ ಬದಲಾವಣೆ ಮಾಡಲು ಅವಕಾಶ ಇಲ್ಲ. ಹೀಗಾಗಿ ಸರ್ಕಾರದ ಅವಸರದ ಕ್ರಮವನ್ನು ತಡೆಯುವಂತೆ ಮನವಿ ಮಾಡಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ರಾಜ್ಯ ಸರ್ಕಾರ ರಾಜ್ಯದ ಪ್ರಾಥಮಿಕ, ಮಾಧ್ಯಮಿಕ ಶಾಲೆಗಳ ಪಠ್ಯ ಪುಸ್ತಕ ಬದಲಾವಣೆ ಮಾಡಲು ಮುಂದಾಗಿದೆ. ಆದರೆ ಬದಲಾವಣೆ ವೇಳೆ ಕಾನೂನು ಅನುಸರಿಸಬೇಕು. ಯಾವುದೇ ಪಠ್ಯ ಪುಸ್ತಕ ಬದಲಾವಣೆ ಮಾಡಬೇಕಾದರೆ ಪಠ್ಯ ಪುಸ್ತಕ ಪರಿಷ್ಕರಣೆ  ಸಮಿತಿಯಿಂದ ಶಿಫಾರಸು ಪಡೆಯಬೇಕು. ಆದರೆ ಈವರೆಗೆ ಸಮಿತಿ ವರದಿಯನ್ನೇ ಕೊಟ್ಟಿಲ್ಲ. ಆದರೂ ಸರ್ಕಾರ ಈ ವರ್ಷವೇ ಪುಸ್ತಕ ಮುದ್ರಣಕ್ಕೆ ಮುಂದಾಗಿದೆ. ಎನ್‌ಸಿಆರ್‌ಟಿ ಪ್ರಕಾರ ಪರಿಷ್ಕರಣೆ ಆಗಬೇಕು. ಹೀಗಾಗಿ ಏಕಾಏಕಿ ಇದನ್ನ ಜಾರಿಗೊಳಿಸುತ್ತಿರುವುದು ಸರಿಯಲ್ಲ. ರಾಜ್ಯಪಾಲರಿಗೂ ಈ ಬಗ್ಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್‌ಗೆ ಭಾರೀ ಕಾಮೆಂಟ್ಸ್‌!
ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; 'ಯಾರಿಗೆ ಬೇಕು ಈ ಲೋಕ'ವೆಂದು ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ!