
ಚಾರ್ ಮಿನಾರ್ : ಭಾರತೀಯ ಜನತಾ ಪಾರ್ಟಿ ಅಲ್ಪ ಸಂಖ್ಯಾತ ಆಯೋಗವು ಬುಧವಾರ ತೆಲಂಗಾಣ ಸರ್ಕಾರವು 50 ಕೋಟಿ ಹಣ ನೀಡುವಂತೆ ಕೋರಿದೆ. ಮುಂದಿನ ಮೊಹರಮ್ ತಯಾರಿಗಾಗಿ ಈ ಪ್ರಮಾಣದಲ್ಲಿ ಹಣವನ್ನು ನೀಡಬೇಕು ಎಂದು ಕೋರಿದೆ.
ಬಿಜೆಪಿ ಅಲ್ಪ ಸಂಖ್ಯಾತ ಆಯೋಗದ ವಕ್ತಾರರಾದ ಮಿರ್ ಫಿರಾಸತ್ ಅಲಿ ಬಕ್ರಿ ಈ ಬಗ್ಗೆ ಮಾತನಾಡಿ ಮುಂದಿನ ಮೊಹಮರಂ ತಯಾರಿಗಾಗಿ ಒಂದು ತಿಂಗಳ ಮೊದಲು ಸಭೆ ನಡೆಸುವ ಮೂಲಕ ಚರ್ಚಿಸಲಾಗುತ್ತದೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ.
ಸದ್ಯ ತೆಲಂಗಾಣ ಮುಖ್ಯಮಂತ್ರಿ ಗೆ ಈ ಬಗ್ಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಅಧಿಕಾರಿಗಳಿಮದ ಸೂಕ್ತ ಪ್ರಕ್ರಿಯೆ ಬಂದಿಲ್ಲ ಎಂದಿದ್ದಾರೆ. ಆದರೆ ತೆಲಂಗಾಣ ವಕ್ಫ್ ಬೋರ್ಡ್ ಈ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತದೆ ಎನ್ನುವ ಭರವಸೆ ಇದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.