ಛಾಪಾ ಕಾಗದ ಹಗರಣದಲ್ಲಿ ಬಂಧಿತರಾಗಿದ್ದ ಎಂಎಲ್ಎ ಬಿಜೆಪಿಗೆ ಗುಡ್‌ಬೈ

Published : Nov 13, 2018, 04:11 PM IST
ಛಾಪಾ ಕಾಗದ ಹಗರಣದಲ್ಲಿ ಬಂಧಿತರಾಗಿದ್ದ ಎಂಎಲ್ಎ ಬಿಜೆಪಿಗೆ ಗುಡ್‌ಬೈ

ಸಾರಾಂಶ

ಪಂಚ ರಾಜ್ಯಗಳ ಚುನಾವಣೆ ಸುದ್ದಿಯಲ್ಲಿ ಇರುವಾಗಲೆ ಮಹಾರಾಷ್ಟ್ರದ ಬಿಜೆಪಿಗೆ ಆಘಾತವಾಗಿದೆ. ಶಾಸಕ ಅನಿಲ್ ಗೋಟೆ ರಾಜೀನಾಮೆ ನೀಡಿದ್ದಾರೆ.

ಮುಂಬೈ(ನ.13) ಬಿಜೆಪಿಗೆ ಮಹಾರಾಷ್ಟ್ರದ ಶಾಸಕ ಆಘಾತ ನೀಡಿದ್ದು ಪಕ್ಷ ತೊರೆದಿದ್ದಾರೆ. ಮಹಾರಾಷ್ಟ್ರದ ಧುಲೆ ಕ್ಷೇತ್ರ ಪ್ರತಿನಿಧಿಸುವ ಅನಿಲ್ ಮುಂದಿನ ವಾರ ರಾಜೀನಾಮೆ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ತಿಂಗಳು ಒಬ್ಬ ಬಿಜೆಪಿ ಎಂಎಲ್ ಎ ಪಕ್ಷ ತೊರೆದಿದ್ದರು.

ನಾನು ನವೆಂಬರ್ 19ಕ್ಕೆ ರಾಜೀನಾಮೆಯನ್ನು ಸ್ಪೀಕರ್ ಗೆ ಸಲ್ಲಿಕೆ ಮಾಡಲಿದ್ದೇನೆ. ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಅಂದೇ ಸಲ್ಲಿಕೆ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಕೆಲ ಜನರು ವಿರೋಧ ಮಾಡುತ್ತಿದ್ದರೂ ಪಕ್ಷದ ಹಿರಿಯ ನಾಯಕರು ನಮ್ಮ ಮಾತಿಗೆ ಬೆಲೆ ನೀಡುತ್ತಿಲ್ಲ. ಕ್ರಿಮಿನಲ್ ಹಿನ್ನೆಲೆ ಇರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.2009ರಲ್ಲಿ ಸ್ವತಂತ್ರವಾಗಿ ಗೆದ್ದಿದ್ದ ಅನಿಲ್ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು. ಛಾಪಾ ಕಾಗದ ಹಗರಣ ರೂವಾರಿ ಅಬ್ದುಲ್ ಕರೀಂ ತೆಲಗಿ ಪ್ರಕರಣದಲ್ಲಿ ಅನಿಲ್ ಸಹ ಬಂಧನಕ್ಕೆ ಗುರಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!