
ಚಿತ್ರದುರ್ಗ[ಡಿ.25] ಸಿಎಂ ಕುಮಾರಸ್ವಾಮಿ ಅವರ ಶೂಟೌಟ್ ಹೇಳಿಕೆ ಬಗ್ಗೆ ಶಾಸಕ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿರುವ ಬಿ.ಶ್ರೀರಾಮುಲು ‘ರಾಜ್ಯದ ಮುಖ್ಯಮಂತ್ರಿ ಆದವರು ಜವಾಬ್ದಾರಿ ಮರೆತು ಹೇಳಿಕೆ ನೀಡಿದ್ದಾರೆ. ಅವರ ಪಕ್ಷದ ಕಾರ್ಯಕರ್ತನ ಕೊಲೆಯಾಗಿದೆ ಅನ್ನೋ ಕಾರಣಕ್ಕೆ ಉದ್ವೇಗದಿಂದ ಶೂಟ್ ಔಟ್ ಮಾಡಿ ಎಂದಿದ್ದಾರೆ. ಆದರೆ ರಾಜ್ಯದಲ್ಲಿ ನೂರಾರು ಹಿಂದು ಯುವಕರ ಹತ್ಯಯಾದಾಗ ಈ ಶಬ್ದ ಬಳಸಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರು ಈ ರೀತಿ ಮಾತನಾಡಬಾರದು ಎಂದಿದ್ದಾರೆ.
JDS ಕಾರ್ಯಕರ್ತ ಹತ್ಯೆ: ಅಂತಿಮ ದರ್ಶನ ವೇಳೆ ಕುಮಾರಸ್ವಾಮಿ ಕಣ್ಣೀರು
ಸಮ್ಮಿಶ್ರ ಸರ್ಕಾರ ಪತನಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ. ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಮ್ಮ ನಾಯಕ ಬಿಎಸ್ ವೈ ಆದೇಶ ನೀಡಿದ್ದು ಅದನ್ನು ಪಾಲಿಸುತ್ತೇನೆ ಎಂದು ಚಿತ್ರದುರ್ಗ ವಾಲ್ಮೀಕಿ ಸಮುದಾಯದ ಸರ್ಕಾರಿ ನೌಕರರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶ್ರೀರಾಮುಲು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.