
ಬೆಂಗಳೂರು(ಜ.19): ಬಿಜೆಪಿ ಶಾಸಕ ರಾಜು ಕಾಗೆ ಕುಟುಂಬದ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಶಾಸಕ ರಾಜು ಕಾಗೆ ಸೇರಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಭೀಮಾಶಂಕರ ಗ್ರಾಮದಲ್ಲಿ 13 ಆರೋಪಿಗಳ ಪೈಕಿ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಶಾಸಕ ರಾಜುಕಾಗೆ, ಅವರ ಪುತ್ರಿ ಶೋಭಾ ಕಾಗೆ, ಸಹೋದರ ಶಿವಗೌಡ ಕಾಗೆ, ಶಿವಗೌಡ ಕಾಗೆ ಪತ್ನಿ ಹಾಗೂ ರಾಜು ಕಾಗೆ ಚಾಲಕ ನನ್ನು ಬಂಧಿಸಲಾಗಿದೆ. ಜನವರಿ 1 ರಂದು ಕಾಂಗ್ರೆಸ್ ಕಾರ್ಯಕರ್ತ ವಿವೇಶ್ ಶೆಟ್ಟಿ ಮನೆಗೆ ನುಗ್ಗಿದ ಶಾಸಕ ರಾಜುಕಾಗೆ ಪಟಾಲಂ, ವಿವೇಕ್ ಶೆಟ್ಟಿಯನ್ನು ಮನಬಂದಂಥೆ ಥಳಿಸಿತ್ತು.
ಈ ಪ್ರಕರಣ ಸಂಬಂಧ ಶಾಸಕ ರಾಜು ಕಾಗೆ ಸೇರಿದಂತೆ 13 ಆರೋಪಿಗಳ ವಿರುದ್ಧ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ 10 ದಿನಗಳ ಬಳಿಕ 13 ಆರೋಪಿಗಳ ಪೈಕಿ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.