ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್ ದೊರಕಿದೆ. ಬಿಜೆಪಿ ಶಾಸಕರೋರ್ವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಭೋಪಾಲ್ : ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್ ದೊರಕಿದೆ.
ಶೀಘ್ರದಲ್ಲೇ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದು ಈ ವೇಳೆ ಇಲ್ಲಿನ ಬಿಜೆಪಿ ಶಾಸಕ ಸಂಜಯ್ ಶರ್ಮ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಸಂಜಯ್ ಶರ್ಮ ಕಾಂಗ್ರೆಸ್ ಸೇರಿದ್ದಾರೆ.
ನರಸಿಂಗ ಪುರ ಜಿಲ್ಲೆಯ ತೆಂಡುಕೇಡಾ ವಿಧಾನಸಭೆ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದರು.
ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಗೆ ಕೊಂಚ ಹಿನ್ನಡೆಯಾದಂತಾಗಿದೆ.
ಇನ್ನೇನು ಮಧ್ಯ ಪ್ರದೇಶದ ಚುನಾವಣೆ ಸಮೀಪ ಇರುವಾಗಲೇ ನಡೆದ ಈ ಬೆಳವಣಿಗೆ ಬಿಜೆಪಿಗೆ ಆಘಾತವನ್ನುಂಟು ಮಾಡಿದೆ.