ಬಿಜೆಪಿ ಶಾಸಕನ ಮರಾಠಿ ಪ್ರೇಮ: ಕನ್ನಡಿಗರ ಆಕ್ರೋಶ

Published : Aug 17, 2017, 11:27 PM ISTUpdated : Apr 11, 2018, 12:40 PM IST
ಬಿಜೆಪಿ ಶಾಸಕನ ಮರಾಠಿ ಪ್ರೇಮ: ಕನ್ನಡಿಗರ ಆಕ್ರೋಶ

ಸಾರಾಂಶ

ಇಂದು ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮರಾಠಿಯಲ್ಲಿ ಮಾತನಾಡಿದ ಶಾಸಕ ಪಾಟೀಲ್ ನೂತನ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಬೆಳಗಾವಿ(ಆ.17): ನಾಡು, ನುಡಿ ಜಲದ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಬೇಕಿದ್ದ ಬೆಳಗಾವಿಯ ಬಿಜೆಪಿ ಶಾಸಕ ಸಂಜಯ ಪಾಟೀಲ್ ಮರಾಠಿ ಪ್ರೇಮ ಪ್ರದರ್ಶಿಸಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಇಂದು ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮರಾಠಿಯಲ್ಲಿ ಮಾತನಾಡಿದ ಶಾಸಕ ಪಾಟೀಲ್ ನೂತನ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಬೆಳಗಾವಿ ಪಾಲಿಕೆಯಲ್ಲಿ ಎಂಇಎಸ್ ಪ್ರಾಬಲ್ಯವಿದೆ. ಆದರೆ ಪಾಲಿಕೆ ಅಧಿಕಾರಿಗಳು ಕನ್ನಡ ಗಟ್ಟಿಗೊಳಿಸುವ ಕೆಲಸ ಮಾಡುತ್ತಲೆ ಇದ್ದು, ನಾಡಗೀತೆಯನ್ನು ಕಡ್ಡಾಯಗೊಳಿಸಿದೆ. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕ ಸಂಜಯ ಪಾಟೀಲ್ ಮರಾಠಿ ಭಾಷೆಯಲ್ಲಿ ಮಾತನಾಡುವ ಮೂಲಕ ಕನ್ನಡ ಭಾಷೆ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಕನ್ನಡಪರ ಸಂಘಟನೆಗಳು ಖಂಡಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌