
ಬೆಳಗಾವಿ[ಜೂ.30] ಕಾಂಗ್ರೆಸ್ನ ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ಕೇಳಿದ ಸುದ್ದಿಗಾರರಿಗೆ ಸಚಿವ ರಮೇಶ್ ಜಾರಕಿಹೊಳಿ ಶಾಕ್ ನೀಡಿದ್ದಾರೆ. ಬಿಜೆಪಿ ಶಾಸಕರೆ ನಮ್ಮೊಂದಿಗೆ ಟಚ್ ನಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ಎಂ.ಬಿ.ಪಾಟೀಲ್ ಗೆ ಸಚಿವ ಸ್ಥಾನ ಸಿಕ್ಕೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ ಉತ್ತರ ಕರ್ನಾಟಕದ ನಾಯಕರೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಬೇಕು. ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಮರ್ಥರಿದ್ದಾರೆ ಎಂದು ಪ್ರತಿಪಾದಿಸಿದರು.
ಮೈತ್ರಿ ಸರಕಾರವನ್ನು ಒಕ್ಕಲಿಗರ ಸರಕಾರ ಎಂದು ಕರೆಯುವುದು ಸರಿ ಅಲ್ಲ. ಎಲ್ಲ ಸಮುದಾಯದವರಿಗೂ ಪ್ರಾಧಾನ್ಯತೆ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.