ಡಿವೈಎಸ್ಪಿ ಪ್ರಕರಣ: ಸದನದ ಬಾವಿಗಿಳಿದು ಬಿಜೆಪಿ ಶಾಸಕರು ಪ್ರತಿಭಟನೆ

Published : Nov 20, 2017, 03:40 PM ISTUpdated : Apr 11, 2018, 01:06 PM IST
ಡಿವೈಎಸ್ಪಿ ಪ್ರಕರಣ: ಸದನದ ಬಾವಿಗಿಳಿದು ಬಿಜೆಪಿ ಶಾಸಕರು ಪ್ರತಿಭಟನೆ

ಸಾರಾಂಶ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಸದ್ದು ಮಾಡಿದೆ. ಪ್ರಕರಣದಲ್ಲಿ  ಸರ್ಕಾರದ ಹಸ್ತಕ್ಷೇಪ ಮಾಡುತ್ತಿದೆ ಎಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   

ಬೆಳಗಾವಿ (ನ.20): ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಸದ್ದು ಮಾಡಿದೆ. ಪ್ರಕರಣದಲ್ಲಿ  ಸರ್ಕಾರದ ಹಸ್ತಕ್ಷೇಪ ಮಾಡುತ್ತಿದೆ ಎಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   

ಸರ್ಕಾರದ ಅಣತಿಯಂತೆ ಪೋಸ್ಟ್ ಮಾರ್ಟಂ ಮಾಡಿದ್ದಾಗಿ ಗಣಪತಿ ಪ್ರಕರಣದಲ್ಲಿ ಪೋಸ್ಟ್ ಮಾರ್ಟಂ ಮಾಡಿದ ವೈದ್ಯೆ ಡಾ. ಶೈಲಜಾ ಅವರೇ ಸಿಬಿಐಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು  ಪ್ರತಿಪಕ್ಷ  ನಾಯಕ ಜಗದೀಶ್ ಶೆಟ್ಟರ್ ಪ್ರಸ್ತಾಪಿಸಿದ್ದಾರೆ. ಸರ್ಕಾರ ಸರ್ಕಾರಿ ವೈದ್ಯೆ ಶೈಲಜಾ ಮೇಲೆ ಒತ್ತಡ ತಂದಿದೆ. ನಾವು ಪದೇ ಪದೇ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿದರೂ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.  ಕೂಡಲೇ ಜಾರ್ಜ್ ರಾಜೀನಾಮೆ ಕೊಡಲೇಬೇಕು. ಮುಖ್ಯಮಂತ್ರಿಯವರು ರಾಜೀನಾಮೆ ನೀಡಲಿ ಎಂದು  ಬಿಜೆಪಿ ಸದಸ್ಯರು  ಆಗ್ರಹಿಸಿದ್ದಾರೆ.  ವಿಧಾನಸಭೆಯಲ್ಲಿ ಪ್ರತಿಪಕ್ಷ- ಆಡಳಿತ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದ್ದು  ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಕೆಲ ಮಾಧ್ಯಮದಲ್ಲಿ ಬಂದದ್ದನ್ನೇ ಹೇಳಿದ್ರೆ ಹೇಗೆ ? ನಿಮ್ಮ ಬಳಿ ಡಾಕ್ಟರ್ ಹೇಳಿಕೆ ಬಗ್ಗೆ ಸಾಕ್ಷಿ ಇದೆಯಾ ತೋರಿಸಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.  ರಾಮಲಿಂಗಾರೆಡ್ಡಿ ಹೇಳಿಕೆ ಬಿಜೆಪಿ ಸದಸ್ಯ ಸುನೀಲ್​ ಕುಮಾರ್ ಕಿಡಿಕಾರಿದ್ದಾರೆ.  ‘ಗೃಹ ಸಚಿವರು ಮಾಧ್ಯಮಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಜಾರ್ಜ್ ವಿಚಾರದಲ್ಲಿ ಸರ್ಕಾರ ಮೃಧು ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌