
ನವದೆಹಲಿ : ಕೇಂದ್ರ ಸರ್ಕಾರ ರಫೇಲ್ ಖರೀದಿ ಹಗರಣದಲ್ಲಿ ಭಾಗಿಯಾಗುವ ಮೂಲಕ ಭಾರೀ ಭ್ರಷ್ಟಾಚಾರ ಎಸಗಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಕೇಜ್ರಿವಾಲ್ ಆರೋಪಕ್ಕೆ ಹಿರಿಯ ಬಿಜೆಪಿ ಮುಖಂಡ ಯಶವಂತ್ ಸಿನ್ಹಾ ಹಾಗೂ ಶತ್ರುಘ್ನ ಸಿನ್ಹಾ ಕೂಡ ಧ್ವನಿ ಗೂಡಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಸಮ್ಮೇಳದಲ್ಲಿ ಮಾತನಾಡಿದ ಕೇಜ್ರಿವಾಲ್ ಕಾಂಗ್ರೆಸ್ ಗಿಂತಲೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಐದು ವರ್ಷಗಳ ಹಿಂದೆ ಜನರು ದೇಶದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಬೇಕು ಎಂದು ಕಾಂಗ್ರೆಸ್ ನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿ ಬಿಜೆಪಿಗೆ ಅಧಿಕಾರ ನೀಡಿದರು. ಆದರೆ ಈ ಪಕ್ಷವೂ ಕೂಡ ಭ್ರಷ್ಟಾಚಾರವನ್ನು ಮುಂದುವರಿಸಿತು ಎಂದರು. .
ಭ್ರಷ್ಟಾಚಾರವನ್ನು ಬಿಜೆಪಿಯು ದೇಶದಲ್ಲಿ ಮುಂದುವರಿಸಿದ್ದಲ್ಲದೇ ಭಾರೀ ಹಗರಣಗಳನ್ನು ನಡೆಸಿದೆ. ಕಾಂಗ್ರೆಸ್ 2ಜಿ ಹಗರಣ ಮಾಡಿದರೆ ಇವರು ಸಹರಾ ಬಿರ್ಲಾ ಡೈರಿ ಸ್ಕ್ಯಾಮ್ ಮಾಡಿದರು. ಅವರು ಕಾಮನ್ ವೆಲ್ತ್ ಹಗರಣ ಮಾಡಿದರೆ ಇವರು ಲಲಿತ್ ಮೋದಿ ಹಗರಣ ಮಾಡಿದರು. ಅವರು ಭೋಫೋರ್ಸ್ ಹಗರಣದಲ್ಲಿ ಪಾಲ್ಗೊಂಡರೆ ಇವರು ರಫೇಲ್ ಸ್ಕ್ಯಾಮ್ ಮಾಡಿದರು ಎಂದು ಕೇಜ್ರಿವಾಲ್ ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.